ಇದೇ ಹೊತ್ತಿಗೆ ಸಾಂಪ್ರದಾಯಿಕ ಕಂಬಳ ನಡೆಯುವ ಜಾಗದಲ್ಲಿ ನಾಗಗಳ ಓಡಾಟ ಜಾಸ್ತಿಯಾಗಿದೆ. ಸುಧೀರ್ ಶೆಟ್ಟಿ, ದಿ. ಗುಮ್ಮಣ್ಣ ಶೆಟ್ಟಿ, ಪ್ರವೀಣ್ ಕುಲಾಲ್ ಮತ್ತು ಕೊಲ್ಯ ಬಾಬು ಶೆಟ್ಟಿ ಎಂಬುವವರಿಗೆ ಈ ಜಾಗ ಸಂಬಂಧಪಟ್ಟಿದ್ದು ಹಲವು ರೀತಿಯ ಘಟನೆಗಳಿಗೆ ಕಳೆದ ಕೆಲ ದಿನಗಳಿಂದ ಕಂಬಳ ಗದ್ದೆ ಸಾಕ್ಷಿಯಾಗಿದೆ. ಇದರಿಂದ ಭಯಗೊಂಡ ಜಾಗದ ಮಾಲಿಕರು ಕಂಬಳ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.ಸಾಂಪ್ರದಾಯಿಕ ಕಂಬಳ ನಡೆಯದೆ ಭಯದಲ್ಲಿ ಇದ್ದ ಊರವರೂ ಇದರಿಂದ ನಿಟ್ಟುಸಿರು ಬಿಟ್ಟಿದ್ದು ಸದ್ಯ ಕಂಬಳದ ಕರೆ ಪೂಜೆಯನ್ನೂ ನೆರವೇರಿಸಿದ್ದಾರೆ. ಪೂಂಜ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಅಸ್ರಣ್ಣ ಕೃಷ್ಣಪ್ರಸಾದ್ ಭೂಮಿ ಪೂಜೆ ನೆರವೇರಿಸಿದ್ದಾರೆ. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ನೇತೃತ್ವದಲ್ಲಿ ಗುಂಡ್ಯಾರು ಸಂಜೀವಶೆಟ್ಟಿಯವರ ಗೌರವಾಧ್ಯಕ್ಷತೆಯಲ್ಲಿ ಹೊಕ್ಕಾಡಿಗೋಳಿ ಕಂಬಳ ನಡೆಯಲಿದೆ.