ಮಂಗಳೂರಿನ ಮಠದಕಣಿಯಲ್ಲಿ ನವದುರ್ಗೆಯರ ವೇಷ ಧರಿಸಿ ಅಸುರ ಸಂಹಾರ ಕಥೆಯನ್ನ ಮರು ಸೃಷ್ಟಿ ಮಾಡಲಾಗಿದೆ. ಶೈಲಾಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕುಷ್ಮಾಂಡಾ, ಸ್ಕಂದಮಾತಾ, ಕಾಳರಾತ್ರಿ, ಕಾತ್ಯಾಯನಿ, ಮಹಾಗೌರಿ ಮತ್ತು ಸಿಧ್ಧಿಧಾತ್ರಿಯ ಅವತಾರ ದಲ್ಲಿ ಮಾಡೆಲಿಂಗ್ ಕ್ಷೇತ್ರದ ಮೂವರು ಹಾಗೂ ಡ್ಯಾನ್ಸ್ ಟೀಂನ ಆರು ಮಹಿಳೆಯರ ತಂಡ ಭಾಗಿಯಾಗಿದೆ. ನವದುರ್ಗೆಯರಿಗೆ ಮಂಗಳೂರಿನ ಪ್ರಿಯಾ ಬಾಳಿಗಾ ಮೇಕಪ್ ಟೀಂ ಬಣ್ಣ ಹಚ್ಚಿದ್ದು, ಸವಿತಾ ಚೇತನ್, ಸಪ್ನಾ, ಮಮತಾ, ಕೀರ್ತಿ, ಶ್ರದ್ದ, ಸೌಮ್ಯಲತಾ, ಶಾರ್ಲೆಟ್, ರಕ್ಷಾ, ಸೌಮ್ಯ ನವದುರ್ಗೆಯರಾಗಿ ಬದಲಾಗಿದ್ದರು.