ಖರ್ಜೂರದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಅದಲ್ಲದೆ, ಇದರಲ್ಲಿ ತಾಮ್ರ, ಸೆಲೆನಿಯಮ್, ಮೆಗ್ನೀಸಿಯಮ್ ಮುಂತಾದ ಅನೇಕ ಪೋಷಕಾಂಶಗಳಿವೆ. ಅವು ರಕ್ತವನ್ನು ಹೆಚ್ಚಿಸುವುದಲ್ಲದೆ ಮೂಳೆಗಳನ್ನು ಬಲಪಡಿಸುತ್ತವೆ. ದೇಹದಲ್ಲಿ ರಕ್ತಹೀನತೆಯನ್ನು ಹೋಗಲಾಡಿಸಲು, ವಿಟಮಿನ್ ಸಿ ಸಮೃದ್ಧವಾಗಿರುವ ಪದಾರ್ಥಗಳನ್ನು ತಿನ್ನಬೇಕು. ಕಿತ್ತಳೆ ಹಣ್ಣು, ನಿಂಬೆ, ಕ್ಯಾಪ್ಸಿಕಂ, ಟೊಮೆಟೊ, ದ್ರಾಕ್ಷಿ, ಬೆರ್ರಿ ಮುಂತಾದವುಗಳನ್ನು ಆಹಾರದಲ್ಲಿ ಸೇರಿಸಿ.