ಖಾಲಿ ಹೊಟ್ಟೆಯಲ್ಲಿ ಎರಡು ದೊಡ್ಡಪತ್ರೆ ಎಲೆಯನ್ನು ತಿಂದು ನಸುಬೆಚ್ಚಗಿನ ನೀರನ್ನು ಕುಡಿಯುತ್ತಾ ಬಂದರೆ, ತಮ್ಮ ಅಮ್ಮನಿಗೆ ಸೀನು ಸಂಪೂರ್ಣ ನಿಂತೇ ಹೋಯಿತು ಎಂದಿದ್ದಾರೆ ನಟಿ ಅದಿತಿ. ಇದನ್ನು ಹಿಂಡಿದಾಗ ರಸ ಬರುತ್ತದೆ. ಇಲ್ಲದೇ ಹೋದರೆ ಗ್ಯಾಸ್ ಮೇಲೆ ಎಲೆಯನ್ನು ತುಸು ಬೆಚ್ಚಗೆ ಮಾಡಿ ಹಿಂಡಿದರೂ ರಸ ಬರುತ್ತದೆ. ಆ ರಸವನ್ನು ಕುಡಿಯುತ್ತಾ ಬಂದರೆ, ಕೆಮ್ಮು, ಶೀತ , ಸ್ಕಿನ್ ಅಲರ್ಜಿ, ಕ್ರಿಮಿ ಕಡಿದಿದ್ದರೆ ಎಲ್ಲವೂ ಮಾಯವಾಗುತ್ತದೆ. ಬಾಣಲೆಯಲ್ಲಿ ಎಲೆಯನ್ನು ಬಿಸಿ ಮಾಡಿ ನೆತ್ತಿಗೆ ಹೆಚ್ಚುವುದರಿಂದಲೂ ನೆಗಡಿ, ಕೆಮ್ಮು ಕಡಿಮೆ ಆಗುತ್ತದೆ ಎಂದಿದ್ದಾರೆ. ಇದಕ್ಕೆ ದನಿಗೂಡಿಸಿದ ಅದಿತಿ ಅಮ್ಮ, ಒಂದು ಟೊಂಗೆ ಗಿಡವನ್ನು ಮನೆಯಲ್ಲಿ ನೆಟ್ಟರೆ 10 ಟೈಪ್ ಮಾತ್ರೆಯನ್ನು (Medicines) ಹೊರಕ್ಕೆ ಹಾಕಬಹುದು ಎನ್ನುತ್ತಾರೆ ಅವರು.