"ಈ ಶಸ್ತ್ರಚಿಕಿತ್ಸೆ ಆಸ್ಪತ್ರೆಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಲ್ಲದೆ, ಅಪರೂಪದ ಮತ್ತು ಸಂಕೀರ್ಣ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಹೊಸ ಭರವಸೆಯನ್ನು ನೀಡುತ್ತದೆ" ಎಂದು ಋಷಿಕೇಶದ ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರೊಫೆಸರ್ ಮೀನು ಸಿಂಗ್ ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ, ಸಲ್ಮಾನ್ ವಾರ್ಡ್ನಲ್ಲಿ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಮಾರ್ಜ್ ಆಗುವ ನಿರೀಕ್ಷೆಯಿದೆ. "ನನಗೆ ಹೊಸ ಜೀವನಕ್ಕೆ, ಹೊಸ ತಿರುವು ನೀಡಿದ್ದಕ್ಕಾಗಿ ಮತ್ತು ಈ ಗೆಡ್ಡೆಯಿಂದ ಉಂಟಾದ ನೋವಿನಿಂದ ನನ್ನನ್ನು ಮುಕ್ತಗೊಳಿಸಿದ್ದಕ್ಕಾಗಿ ನಾನು ವೈದ್ಯರಿಗೆ ಕೃತಜ್ಞನಾಗಿದ್ದೇನೆ" ಎಂದು ಸಲ್ಮಾನ್ ಕೃತಜ್ಞತೆ ತಿಳಿಸಿದ್ದಾರೆ.