ವರದಿಯ ಪ್ರಕಾರ, ಭಾರತದಲ್ಲಿ ಮೂರನೇ ಒಂದು ಭಾಗದಷ್ಟು ಜನರು ಪೂರ್ವ-ಮಧುಮೇಹ, ಮೂರನೇ ಎರಡರಷ್ಟು ಜನರು ಅಧಿಕ ರಕ್ತದೊತ್ತಡ (high blood pressure) ಮತ್ತು ಹತ್ತರಲ್ಲಿ ಒಬ್ಬರು ಖಿನ್ನತೆಯೊಂದಿಗೆ ಹೋರಾಡುತ್ತಿದ್ದಾರೆ. ಕ್ಯಾನ್ಸರ್, ಮಧುಮೇಹ, ಹೃದ್ರೋಗ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಸೇರಿದಂತೆ ಈ ಗಂಭೀರ ಕಾಯಿಲೆಗಳು ಅಪಾಯಕಾರಿ ಮಟ್ಟವನ್ನು ತಲುಪುತ್ತಿವೆ ಮತ್ತು ದೇಶದ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತಿವೆ.