ಖಿನ್ನತೆಯಲ್ಲಿರುವವರ ಬಳಿ ಈ ಮಾತುಗಳನ್ನಾಡಿ, ನಿಮ್ಮ ಬೆಂಬಲವೇ ಅವರ ಚಿಕಿತ್ಸೆ
First Published Aug 4, 2020, 5:30 PM ISTಖಿನ್ನತೆ ಎಂಬುದು ಬಹಳ ಸಾಮಾನ್ಯ ಸಮಸ್ಯೆಯಾಗಿದೆ. ಉದ್ಯೋಗದಲ್ಲಿ ಅಂದುಕೊಂಡ ಯಶಸ್ಸು ಸಿಗದಾಗ, ಪ್ರೀತಿಪಾತ್ರರನ್ನು ಕಳೆದುಕೊಂಡಾಗ, ಕೀಳರಿಮೆ ಹೆಚ್ಚಾದಾಗ, ಪ್ರೀತಿಯಲ್ಲಿ ಸೋತಾಗ, ಕಾಯಿಲೆಗಳು ಕಂಗೆಡಿಸಿದಾಗ, ಅವಮಾನದಿಂದ- ಹೀಗೆ ಅನೇಕ ಕಾರಣಕ್ಕೆ ಜನರು ಖಿನ್ನತೆಗೆ ಜಾರುತ್ತಾರೆ. ನಮ್ಮ ಸುತ್ತಮುತ್ತಲಲ್ಲೇ ಹಲವರು ಖಿನ್ನತೆಯಿಂದ ನರಳುತ್ತಿರುತ್ತಾರೆ. ಅವರು ನಮ್ಮವರೇ ಆಗಿದ್ದಾಗ ಅವರನ್ನು ಸಮಾಧಾನ ಪಡಿಸಲು ಮನಸ್ಸು ಚಡಪಡಿಸಿದರೂ, ಏನು ಮಾತನಾಡಬೇಕೆಂಬುದು ಹಲವರಿಗೆ ತಿಳಿಯುವುದಿಲ್ಲ. ಇಂಥ ಸಂದರ್ಭದಲ್ಲಿ ಅವರಿಗೆ ಯಾವುದೇ ಕ್ಷಣ ಬೇಕಾದರೂ ನಾವಿರುವುದಾಗಿ ಅರಿವು ಮೂಡಿಸುವುದೇ ದೊಡ್ಡ ಬಲ. ಖಿನ್ನತೆಯಲ್ಲಿರುವವರ ಬಳಿ ಎಂಥ ಮಾತುಗಳು ಕೆಲಸ ಮಾಡಬಹುದು ಎಂಬ ಅರಿವಿದ್ದರೆ, ಹತ್ತಿರದವರನ್ನು ಈ ವೇದನೆಯಿಂದ ಎತ್ತಲು ಸಹಾಯವಾಗಬಹುದು.