ಗುರುವಾರದಿಂದ ಅಮರನಾಥ ಯಾತ್ರೆ ಶುರು: ಭದ್ರತೆ ಹೇಗಿದೆ?

Published : Jul 02, 2025, 09:10 AM IST

ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥ ಯಾತ್ರೆ ಗುರುವಾರದಿಂದ ಆರಂಭವಾಗಲಿದ್ದು, ಕಾಶ್ಮೀರ ಉಪರಾಜ್ಯಪಾಲರು ಚಾಲನೆ ನೀಡಲಿದ್ದಾರೆ. ಭಕ್ತರ ನೋಂದಣಿ ಆರಂಭವಾಗಿದ್ದು, ಭದ್ರತೆ ಮತ್ತು ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.

PREV
15

ದಕ್ಷಿಣ ಕಾಶ್ಮೀರದ ಹಿಮಾಯಲದಲ್ಲಿರುವ ಅಮರನಾಥದ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಶ್ಮೀರ ಉಪರಾಜ್ಯಪಾಲ ಮನೋಜ್‌ ಸಿನ್ಹಾ, ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ 38 ದಿನದ ಯಾತ್ರೆಯ ನೋಂದಣಿಗಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರ ಹರಿದುದಂಡು ಬರಲು ಶುರುವಾಗಿದೆ.

25

ಅನಂತ್‌ನಾಗ್‌ ಜಿಲ್ಲೆಯ 48 ಕಿ.ಮೀ. ಉದ್ದದ ನುನ್ವಾನ್‌-ಪಹಲ್ಗಾಂ ಮಾರ್ಗ ಹಾಗೂ ಗಂದೇರ್‌ಬಾಲ್‌ ಜಿಲ್ಲೆಯ 14 ಕಿ.ಮೀ. ಉದ್ದದ ಬಲ್ತಾಲ್‌ ಮಾರ್ಗದಲ್ಲಿ ಯಾತ್ರೆ ಸಾಗಲಿದೆ. ಇತ್ತೀಚೆಗೆ 26 ಪ್ರವಾಸಿಗರ ನರಮೇಧ ನಡೆದ ಪಹಲ್ಗಾಂ ಮಾರ್ಗದಲ್ಲೇ ಯಾತ್ರೆ ಸಾಗುವ ಕಾರಣ ಈ ಪ್ರದೇಶದಲ್ಲಿ ಈಗಾಗಲೇ ಭದ್ರತೆ ಮತ್ತು ಅಗತ್ಯ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

35

ಏನೇನು ವ್ಯವಸ್ಥೆಗಳು?

ಅಮರನಾಥ ಯಾತ್ರೆಗೆ ತೆರಳುವ ಭಕ್ತಾದಿಗಳು ನೋಂದಣಿ ಮಾಡಿಸಿಕೊಳ್ಳಬೇಕು. ಶಾಲಿಮಾರ್‌ ಪ್ರದೇಶದ ವೈಷ್ಣವಿ ಧಾಮ, ಪಂಚಾಯತ್‌ ಭವನ ಮತ್ತು ಮಹಾಜನ ಸಭಾದಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಸರಸ್ವತಿ ಧಾಮದಲ್ಲಿ ಮಾತ್ರವೇ ಟೋಕನ್‌ ವಿತರಿಸಲಾಗುತ್ತಿದೆ.

45

1600ಕ್ಕೂ ಅಧಿಕ ಭಕ್ತರು ಭಗವತಿ ನಗರ ಬೇಸ್‌ ಕ್ಯಾಂಪ್‌ನಲ್ಲಿ ತಂಗಿದ್ದಾರೆ. ಅತ್ತ ಸಾಧುಗಳಿಗಾಗಿ ಪುರಾನಿ ಮಂಡಿಯಲ್ಲಿರುವ ರಾಮ ದೇಗುಲದ ಸಂಕೀರ್ಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಅವರಿಗೆ ಅಲ್ಲೇ ಉಳಿದುಕೊಳ್ಳಲು ವ್ಯವಸ್ಥೆಗಳನ್ನೂ ಮಾಡಲಾಗಿದ್ದು, ಈಗಾಗಲೇ 300ಕ್ಕೂ ಅಧಿಕ ಸಾಧುಗಳು ಆಗಮಿಸಿದ್ದಾರೆ.

55

ಈ ಬಗ್ಗೆ ಮಾತನಾಡಿದ ವಿಭಾಗೀಯ ಕಮೀಷನರ್‌ ರಮೇಶ್‌ ಕುಮಾರ್‌ ಮಾತನಾಡಿ, ‘ಜಮ್ಮು ಆದ್ಯಂತ 50,000 ಜನರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು, ಬಿಗಿ ಭದ್ರತೆಯಲ್ಲಿ ಜು.2ರಂದು ಯಾತ್ರೆಗೆ ಚಾಲನೆ ನೀಡಲಿದ್ದಾರೆ’ ಎಂದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories