ವರದಿಗಳ ಪ್ರಕಾರ, ಶುಕ್ರವಾರ ಸಂಜೆ ಲಾಲು ಯಾದವ್ ಅವರನ್ನು ಭೇಟಿಯಾಗಿರುವ ಅಖಿಲೇಶ್ ಪ್ರಸಾದ್ ಸಿಂಗ್ ಕ್ಷೇತ್ರ ಹಂಚಿಕೆ ಮತ್ತು ಚುನಾವಣಾ ಸಿದ್ಧತೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಆರ್ಜೆಡಿ ಮುಂದೆ ಕ್ಷೇತ್ರ ಹಂಚಿಕೆ ಕುರಿತು ಹೊಸ ಸಮೀಕರಣ ಇರಿಸಿದ್ದಾರಂತೆ. ಈ ಚರ್ಚೆಯ ಬೆನ್ನಲ್ಲೇ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಇಂದು ಸಂಜೆ ಅಥವಾ ರಾತ್ರಿ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.