Published : Sep 24, 2020, 05:52 PM ISTUpdated : Sep 24, 2020, 07:10 PM IST
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಮಾರ್ಗಸೂಚಿಯನ್ವಯ ಅವರ ಅಂತ್ಯಕ್ರಿಯೆ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ದೆಹಲಿಯಲ್ಲಿ ನಡೆಯಲಿದೆ. ಇನ್ನು ಅಗಲಿದ ಅಪರೂಪದ ರಾಜಕಾರಣಿಯ ದೆಹಲಿ ನಿವಾಸಕ್ಕೆ ಭೇಟಿ ನೀಡಿದ ರಕ್ಷಣಾ ಸಚಿವ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.