ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ಧವಾಗಿರುವ ಕಾಕ್ರೋಚ್ ಜನತಾ ಪಾರ್ಟಿ, ಜೂನ್ 14 ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದೆ. ಆದರೆ, ಈ ಪ್ರತಿಭಟನೆಗೆ ಪಕ್ಷದ ವಕ್ತಾರ ಸೌರವ್ ದಾಸ್ ಅವರು ತಮಿಳಿನಲ್ಲಿ ಆಹ್ವಾನ ನೀಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಜೂನ್ 14ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ
ಸೋಶಿಯಲ್ ಮೀಡಿಯಾದಲ್ಲಿ 20 ಮಿಲಿಯನ್ಗೂ ಅಧಿಕ ಫಾಲೋವರ್ಸ್ಗಳನ್ನು ಹೊಂದಿರುವ ಕಾಕ್ರೋಚ್ ಜನತಾ ಪಾರ್ಟಿ, ಇದೇ ಜೂನ್ 14ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದೆ. ಇತ್ತೀಚೆಗಷ್ಟೇ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಿತ್ತು.
25
ತಮಿಳು ಭಾಷೆಯಲ್ಲಿ ಆಹ್ವಾನ
ಈ ಪ್ರತಿಭಟನೆ ಮುಂದುವರಿದ ಭಾಗ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ. ಈ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿಯ ಮುಖ್ಯ ವಕ್ತಾರ ಸೌರವ್ ದಾಸ್ ಆಹ್ವಾನಿಸಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾರಣ, ಬೆಂಗಳೂರಿನ ಪ್ರತಿಭಟನೆಗೆ ಸೌರವ್ ದಾಸ್, ತಮಿಳಿನಲ್ಲಿ ತಮಿಳಿಗರನ್ನು ಆಹ್ವಾನಿಸಿದ್ದಾರೆ. ಈ ವಿಡಿಯೋದಲ್ಲಿ ಸೌರವ್ ದಾಸ್, ತಾವು ಪುದುಚೇರಿ ಮೂಲದವರು ಎಂದು ಹೇಳಿಕೊಂಡಿದ್ದಾರೆ.
35
ಕನ್ನಡಿಗರ ಪ್ರತಿಕ್ರಿಯೆ
ಸೌರವ್ ದಾಸ್ ಆಹ್ವಾನದ ವಿಡಿಯೋಗೆ ಪ್ರತಿಕ್ರಿಯಿಸಿರುವ ಕನ್ನಡಿಗರು, ಇದು ಕರ್ನಾಟಕ ಬ್ರೋ ಎಂದು ಕಮೆಂಟ್ ಮಾಡಿದ್ದಾರೆ. ರವಿ ಕೀರ್ತಿಗೌಡ ಎಂಬವರು, ಏಯ್, ತಮಿಳು ಫ್ರೆಂಡ್ಸ್ ಯಾಕೋ? ಬೆಂಗಳೂರಿನಲ್ಲಿದ್ದೀಯಾ ಇಲ್ವಾ? ಚೆನ್ನೈನಾ ಎಂದು ಪ್ರಶ್ನೆ ಮಾಡಿದ್ದಾರೆ.
ಕನ್ನಡಿಗರ ಆಕ್ರೋಶಕ್ಕೆ ಪ್ರತಿಕ್ರಿಯಿಸಿರುವ ಸೌರವ್ ದಾಸ್, ಖಂಡಿತ. ನನಗೂ ಸುಂದರವಾದ ಕನ್ನಡ ಭಾಷೆ ಮಾತನಾಡಲು ಸಾಧ್ಯವಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದಿದ್ದಾರೆ. ಕನ್ನಡ ಭಾಷೆ ಬಂದಿಲ್ಲ ಅಂದ್ರೆ ಪರವಾಗಿಲ್ಲ. ಕರ್ನಾಟಕದಲ್ಲಿನ ಪ್ರತಿಭಟನೆಗೆ ಇಂಗ್ಲಿಷ್ನಲ್ಲಿ ಆಹ್ವಾನಿಸಬಹುದಿತ್ತು ಅಲ್ಲವಾ ಎಂದು ಸೌರವ್ ದಾಸ್ ಅವರಿಗೆ ಕೇಳಿದ್ದಾರೆ
55
ದೆಹಲಿಯ ಜಂತರ್ ಮಂತರ್
ಶನಿವಾರ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯು ಬಹುತೇಕ ಯಶಸ್ವಿಯಾಗಿದ್ದು, ಸುಮಾರು 7,000 ಜನರು ಇದರಲ್ಲಿ ಭಾಗವಹಿಸಿದ್ದರು. ಈ ಚಳವಳಿ ಈಗ ದೇಶಾದ್ಯಂತ ವಿಸ್ತರಿಸಲಿದೆ. ಇದನ್ನು ದೇಶಾದ್ಯಂತ ಕೊಂಡೊಯ್ಯಲು ನಾವು ಮತ್ತಷ್ಟು ಕ್ರಿಯಾಯೋಜನೆಯನ್ನು ರೂಪಿಸುತ್ತೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಾವು ಹಿಂದೆ ಸರಿಯುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ