Published : Nov 25, 2020, 02:39 PM ISTUpdated : Nov 25, 2020, 03:06 PM IST
'ನಿವಾರ್' ಚಂಡಮಾರುತ ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳತ್ತ ವೇಗವಾಗಿ ಚಲಿಸುತ್ತಿದ್ದು, ಭಾರಿ ಪ್ರಮಾಣದಲ್ಲಿ ಹಾನಿ ಮಾಡುವ ಆತಂಕ ಮೂಡಿಸಿದೆ. ಗಂಟೆಗೆ 100-110 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಅನೇಕ ಮರಗಳು ಧರೆಗುರುಳಿವೆ. ಅತ್ತ ಸಮುದ್ರದ ಬದಿಯ ಮೀನುಗಾರರನ್ನೂ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.
ಬುಧವಾರ ಬೆಳಿಗ್ಗೆ ಚೆನ್ನೈನಲ್ಲಿ ಭಾರಿ ಮಳೆಯಾಗಿದೆ. ಸೈಕ್ಲೋನ್ ಇನ್ನೂ ನಗರ ಭಾಗಕ್ಕೆ ಅಪ್ಪಳಿಸುವ ಮುನ್ನವೇ ಮಳೆಯ ಆರ್ಭಟ ಜೋರಾಗಿದೆ.
ಬುಧವಾರ ಬೆಳಿಗ್ಗೆ ಚೆನ್ನೈನಲ್ಲಿ ಭಾರಿ ಮಳೆಯಾಗಿದೆ. ಸೈಕ್ಲೋನ್ ಇನ್ನೂ ನಗರ ಭಾಗಕ್ಕೆ ಅಪ್ಪಳಿಸುವ ಮುನ್ನವೇ ಮಳೆಯ ಆರ್ಭಟ ಜೋರಾಗಿದೆ.
211
ಬುಧವಾರ ಮಧ್ಯಾಹ್ನದ ಬಳಿಕ ಚಂಡಮಾರುತವು ತಮಿಳು ಮತ್ತು ಪುದುಚೆರಿಯ ಕರಾವಳಿಯನ್ನು ಹಾದುಹೋಗಲಿದೆ.
ಬುಧವಾರ ಮಧ್ಯಾಹ್ನದ ಬಳಿಕ ಚಂಡಮಾರುತವು ತಮಿಳು ಮತ್ತು ಪುದುಚೆರಿಯ ಕರಾವಳಿಯನ್ನು ಹಾದುಹೋಗಲಿದೆ.
311
ಗಂಟೆಗೆ 145ಕಿಮೀ ವೇಗದವರೆಗೆ ಮಾಮಲ್ಲಪುರಂ ಮತ್ತು ಕಾರೈಕಲ್ ನಡುವೆ ಚಂಡಮಾರುತವು ಭಾರಿ ಪ್ರಮಾಣದಲ್ಲಿ ಅಪ್ಪಳಿಸಲಿದೆ.
ಗಂಟೆಗೆ 145ಕಿಮೀ ವೇಗದವರೆಗೆ ಮಾಮಲ್ಲಪುರಂ ಮತ್ತು ಕಾರೈಕಲ್ ನಡುವೆ ಚಂಡಮಾರುತವು ಭಾರಿ ಪ್ರಮಾಣದಲ್ಲಿ ಅಪ್ಪಳಿಸಲಿದೆ.
411
ಈಗಾಗಲೇ ಗಾಳಿ ಮಳೆಗೆ ಅನೇಕ ಮರಗಳು ಧರೆಗುರುಳಿದ್ದು, ತೆರವು ಕಾರ್ಯವೂ ಆರಂಭವಾಗಿದೆ.
ಈಗಾಗಲೇ ಗಾಳಿ ಮಳೆಗೆ ಅನೇಕ ಮರಗಳು ಧರೆಗುರುಳಿದ್ದು, ತೆರವು ಕಾರ್ಯವೂ ಆರಂಭವಾಗಿದೆ.
511
ಮಂಗಳವಾರ ಬೆಳಿಗ್ಗೆ 8.30ರಿಂದ ಬುಧವಾರ ಬೆಳಿಗ್ಗೆ 5.30ರ ಅವಧಿಯಲ್ಲಿಯೇ ಚೆನ್ನೈನ ಮತ್ತು ಮೀನಬಕ್ಕಂನಲ್ಲಿ 120 ಮಿಮೀ ಮಳೆ ಸುರಿದಿದೆ.
ಮಂಗಳವಾರ ಬೆಳಿಗ್ಗೆ 8.30ರಿಂದ ಬುಧವಾರ ಬೆಳಿಗ್ಗೆ 5.30ರ ಅವಧಿಯಲ್ಲಿಯೇ ಚೆನ್ನೈನ ಮತ್ತು ಮೀನಬಕ್ಕಂನಲ್ಲಿ 120 ಮಿಮೀ ಮಳೆ ಸುರಿದಿದೆ.
611
ನುಂಗಂಬಕ್ಕಮ್ನಲ್ಲಿ 145 ಮಿಮೀ ಮಳೆ ಸುರಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆಂಬಾರಂಬಕ್ಕಮ್ ಜಲಾಶಯದಿಂದ ಸುಮಾರು 1,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ನುಂಗಂಬಕ್ಕಮ್ನಲ್ಲಿ 145 ಮಿಮೀ ಮಳೆ ಸುರಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆಂಬಾರಂಬಕ್ಕಮ್ ಜಲಾಶಯದಿಂದ ಸುಮಾರು 1,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
711
ಈಗಾಗಲೇ ತಮಿಳುನಾಡು ಮತ್ತು ಪುದುಚೆರಿಯ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ಇದು ಇನ್ನೆರಡು ದಿನಗಳ ಕಾಲ ಮತ್ತಷ್ಟು ಆರ್ಭಟಿಸಲಿದೆ. ಮಳೆಯಿಂದ ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಈಗಾಗಲೇ ತಮಿಳುನಾಡು ಮತ್ತು ಪುದುಚೆರಿಯ ಅನೇಕ ಕಡೆ ಭಾರಿ ಮಳೆಯಾಗುತ್ತಿದೆ. ಇದು ಇನ್ನೆರಡು ದಿನಗಳ ಕಾಲ ಮತ್ತಷ್ಟು ಆರ್ಭಟಿಸಲಿದೆ. ಮಳೆಯಿಂದ ನಗರ ಮತ್ತು ಹಳ್ಳಿ ಪ್ರದೇಶಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
811
ಅನೇಕ ಮರಗಳು ಧರೆಗುರುಳುವ, ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಲಾಗಿದೆ. ಮಳೆ ಗಾಳಿಯ ತೀವ್ರತೆಗೆ ಕಟ್ಟಡ ಕುಸಿತ, ವಿದ್ಯುತ್ ಸಂಪರ್ಕ ಕಡಿತ, ದೂರವಾಣಿ ಸಂಪರ್ಕಗಳ ಕಡಿತಗಳು ಉಂಟಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಅನೇಕ ಮರಗಳು ಧರೆಗುರುಳುವ, ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಲಾಗಿದೆ. ಮಳೆ ಗಾಳಿಯ ತೀವ್ರತೆಗೆ ಕಟ್ಟಡ ಕುಸಿತ, ವಿದ್ಯುತ್ ಸಂಪರ್ಕ ಕಡಿತ, ದೂರವಾಣಿ ಸಂಪರ್ಕಗಳ ಕಡಿತಗಳು ಉಂಟಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
911
ಮಿಳುನಾಡು ಮತ್ತು ಪುದುಚೆರಿಗಳಲ್ಲಿ ಈಗಾಗಲೇ ಪರಿಸ್ಥಿತಿಯನ್ನು ಎದುರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ಬುಧವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಮಿಳುನಾಡು ಮತ್ತು ಪುದುಚೆರಿಗಳಲ್ಲಿ ಈಗಾಗಲೇ ಪರಿಸ್ಥಿತಿಯನ್ನು ಎದುರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ಬುಧವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
1011
ಪುಡುಕೊಟ್ಟೈ, ನಾಗಪಟ್ಟಿಣಂ, ಕುಡ್ಡಲೋರ್, ವಿಳ್ಳುಪುರಂ, ತಂಜಾವೂರ್, ಚೆಂಗಲ್ಪೇಟ್ ಮತ್ತು ತಿರುವಳ್ಳೂರ್ಗಳಲ್ಲಿ ಬಸ್ ಸೇವೆಗಳನ್ನು ಮಂಗಳವಾರದಿಂದಲೇ ಸ್ಥಗಿತಗೊಳಿಸಲಾಗಿದೆ. ದಕ್ಷಿಣ ರೈಲ್ವೆ ಕೂಡ ನವೆಂಬರ್ 24-26ರವರೆಗೆ ಅನೇಕ ರೈಲುಗಳ ಸಂಚಾರವನ್ನು ನಿಲ್ಲಿಸಿದೆ.
ಪುಡುಕೊಟ್ಟೈ, ನಾಗಪಟ್ಟಿಣಂ, ಕುಡ್ಡಲೋರ್, ವಿಳ್ಳುಪುರಂ, ತಂಜಾವೂರ್, ಚೆಂಗಲ್ಪೇಟ್ ಮತ್ತು ತಿರುವಳ್ಳೂರ್ಗಳಲ್ಲಿ ಬಸ್ ಸೇವೆಗಳನ್ನು ಮಂಗಳವಾರದಿಂದಲೇ ಸ್ಥಗಿತಗೊಳಿಸಲಾಗಿದೆ. ದಕ್ಷಿಣ ರೈಲ್ವೆ ಕೂಡ ನವೆಂಬರ್ 24-26ರವರೆಗೆ ಅನೇಕ ರೈಲುಗಳ ಸಂಚಾರವನ್ನು ನಿಲ್ಲಿಸಿದೆ.
1111
ಪುದುಚೆರಿಯಲ್ಲಿ ಮಂಗಳವಾರ ಸಂಜೆಯಿಂದ ಗುರುವಾರದವರೆಗೆ ಸಾರ್ವಜನಿಕರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಔಷಧ, ಪೆಟ್ರೋಲ್-ಡೀಸೆಲ್ ಮತ್ತು ದಿನಸಿ ಸಾಮಗ್ರಿಗಳಂತಹ ಅಗತ್ಯ ವಸ್ತುಗಳ ಸೇವೆ ಹೊರತಾಗಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಪುದುಚೆರಿಯಲ್ಲಿ ಮಂಗಳವಾರ ಸಂಜೆಯಿಂದ ಗುರುವಾರದವರೆಗೆ ಸಾರ್ವಜನಿಕರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಔಷಧ, ಪೆಟ್ರೋಲ್-ಡೀಸೆಲ್ ಮತ್ತು ದಿನಸಿ ಸಾಮಗ್ರಿಗಳಂತಹ ಅಗತ್ಯ ವಸ್ತುಗಳ ಸೇವೆ ಹೊರತಾಗಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ