ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಅಸ್ತು, ಷರತ್ತು ವಿಧಿಸಿದ ಕೇಂದ್ರ ಸರ್ಕಾರ

Published : Jul 21, 2026, 03:45 PM IST

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.

PREV
16
ಅನುಮತಿ ನೀಡಿದ ದೆಹಲಿ ಹೈಕೋರ್ಟ್‌

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಸುದೀರ್ಘ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಸಿದ್ಧ ವಿಜ್ಞಾನಿ ಹಾಗೂ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

26
ದೆಹಲಿ ಹೈಕೋರ್ಟ್‌ನಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಕ್ಕೆ ಅನುಮತಿ

ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಿದೆ.

36
ಕೇಂದ್ರ ಸರ್ಕಾರದಿಂದ 'ಮೇದಾಂತ' ಆಸ್ಪತ್ರೆಗೆ ಸ್ಥಳಾಂತರಕ್ಕೆ 'ನೋ ಅಬ್ಜೆಕ್ಷನ್'

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾಂಗ್ಚುಕ್ ಅವರನ್ನು ಗುರುಗ್ರಾಮದ ‘ಮೇದಾಂತ’ (Medanta) ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ (No Objection) ಎಂದು ಹೈಕೋರ್ಟ್‌ಗೆ ತಿಳಿಸಿದರು.

46
'ನಿರಂತರ ವೈದ್ಯಕೀಯ ಮೇಲ್ವಿಚಾರಣೆ' ಇರಬೇಕೆಂಬ ಷರತ್ತು

ವಾಂಗ್ಚುಕ್ ಅವರ ಸ್ಥಳಾಂತರಕ್ಕೆ ಒಪ್ಪಿಗೆ ಸೂಚಿಸಿದರೂ ಕೇಂದ್ರ ಸರ್ಕಾರ ಒಂದು ಪ್ರಮುಖ ಷರತ್ತನ್ನು ವಿಧಿಸಿದೆ. ವಾಂಗ್ಚುಕ್ ಅವರು ಮೇದಾಂತ ಆಸ್ಪತ್ರೆಯ ವೈದ್ಯರ ನಿರಂತರ ವೈದ್ಯಕೀಯ ಉಸ್ತುವಾರಿಯಲ್ಲಿ ಇರಬೇಕು ಹಾಗೂ ವೈದ್ಯರ ಸಲಹೆಯಿಲ್ಲದೆ ಅವರನ್ನು ಡಿಸ್ಚಾರ್ಜ್ ಮಾಡಬಾರದು ಎಂದು ತುಷಾರ್ ಮೆಹ್ತಾ ಮನವಿ ಮಾಡಿದರು. ಹೈಕೋರ್ಟ್‌ ಪೀಠವು ಸಫ್ದರ್‌ಜಂಗ್ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ದಾಖಲೆಗಳೊಂದಿಗೆ ಅವರನ್ನು ಸ್ಥಳಾಂತರಿಸುವಂತೆ ಸೂಚಿಸಿತು.

56
24ನೇ ದಿನಕ್ಕೆ ಕಾಲಿಟ್ಟ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ

ನೀಟ್ ಅಕ್ರಮವನ್ನು ವಿರೋಧಿಸಿ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ನಿರಹಾರ ಸತ್ಯಾಗ್ರಹವು ಮಂಗಳವಾರಕ್ಕೆ ಬರೋಬ್ಬರಿ 24ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕೇಂದ್ರ ಸರ್ಕಾರದ ವಿರುದ್ಧ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.

66
ಜಂತರ್ ಮಂತರ್‌ನಲ್ಲಿ ಮುಂದುವರಿದ ಬೃಹತ್ ಪ್ರತಿಭಟನೆ

ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಧರಣಿಯನ್ನು ಮುಂದುವರಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಕಾಂತ್ ದೀಪ್ಕೆ ಹಾಗೂ ಅವರ ಬೆಂಬಲಿಗರು ಪ್ರತಿಭಟನಾ ಸ್ಥಳವನ್ನು ಸೇರಿಕೊಂಡಿದ್ದು, ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ವಾಗ್ದಾನ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories