ಒಂದು ಕಡೆ ಕಾಂಗ್ರೆಸ್ ತನ್ನ ಜತೆಗೆ ಉಳಿದ ಪಕ್ಷಗಳನ್ನು ಸೇರಿಸಿಕೊಂಡು ಮೋದಿ ಮೇಲೆ ಸಮರ ಮಾಡಲು ಮಹಾಘಟಬಂಧನ್ ಹೆಸರಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಲೇ ಬಂದಿದೆ. ಈ ನಡುವೆ ಕಾಂಗ್ರೆಸ್ ಕಾರ್ಯಕ್ರಮಗಳಿಂದ ದೂರ ಉಳಿದಿರುವ ಗೌಡರು ಮೋದಿ ಜತೆ ಒಂದಿಷ್ಟು ಕಾಲ ಕಳೆದಿದ್ದು ರಾಷ್ಟ್ರದ ರಾಜಕಾರಣದಲ್ಲಿ ಮತ್ತೊಂದು ದಿಕ್ಕು ತೆರೆದುಕೊಳ್ಳಲಿದೆಯಾ ಎನ್ನುವ ಕುತೂಹಲ ಮನೆ ಮಾಡಿದೆ.