ಮಹುವಾ ಮೊಯಿತ್ರಾ ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಒತ್ತಾಯಿಸಿದ್ದಾರೆ. ಹಾಗೂ, ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು "ವಿಚಾರಣಾ ಸಮಿತಿ" ರಚಿಸುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾರನ್ನು ಮನವಿ ಮಾಡಿದ್ದರು. ಇದನ್ನು ಸ್ವಾಗತಿಸಿದ ಟಿಎಂಸಿ ಸಂಸದೆ, ತನ್ನ ವಿರುದ್ಧದ ಆರೋಪಗಳು ಮಾನಹಾನಿಕರ, ಸುಳ್ಳು, ಆಧಾರರಹಿತ ಎಂದಿದ್ದರು.