ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ತನಿಖಾ ತಂಡವನ್ನು ಕೇರಳ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ತಂತ್ರಿ ಕಂಠರರ್ ರಾಜೀವರರ ಜಾಮೀನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮೌಖಿಕವಾಗಿ ತಿಳಿಸಿದೆ.
ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ತನಿಖಾ ತಂಡಕ್ಕೆ ಕೇರಳ ಹೈಕೋರ್ಟ್ ಚಾಟಿ ಬೀಸಿದೆ. ಪ್ರಕರಣದ ಆರೋಪಿ, ತಂತ್ರಿ ಕಂಠರರ್ ರಾಜೀವರರ ಜಾಮೀನು ರದ್ದು ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್ ಈ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅರ್ಜಿಯನ್ನು ಬುಧವಾರಕ್ಕೆ ಮುಂದೂಡಿದೆ.
24
ಜಾಮೀನನ್ನು ರದ್ದುಗೊಳಿಸಬೇಕು
ತನಿಖೆ ನಡೆಯುತ್ತಿದ್ದಾಗಲೇ ಕೊಲ್ಲಂ ವಿಜಿಲೆನ್ಸ್ ಕೋರ್ಟ್, ತಂತ್ರಿ ರಾಜೀವರರಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ತಂತ್ರಿಯ ಜಾಮೀನನ್ನು ರದ್ದುಗೊಳಿಸಬೇಕು ಎನ್ನುವುದು ಸರ್ಕಾರದ ಪ್ರಮುಖ ಬೇಡಿಕೆಯಾಗಿತ್ತು.
34
ಹೇಳಿಕೆ ನೀಡುವುದು ತಪ್ಪು
ಅಷ್ಟೇ ಅಲ್ಲ, 'ತಂತ್ರಿಯ ವಿರುದ್ಧ ಒಂದೇ ಒಂದು ಸಣ್ಣ ಸಾಕ್ಷ್ಯವೂ ಇಲ್ಲ' ಎಂದು ಕೊಲ್ಲಂ ವಿಜಿಲೆನ್ಸ್ ಕೋರ್ಟ್ ತನ್ನ ಜಾಮೀನು ಆದೇಶದಲ್ಲಿ ಹೇಳಿತ್ತು. ಕೆಳಹಂತದ ನ್ಯಾಯಾಲಯ ಇಂತಹ ಹೇಳಿಕೆ ನೀಡುವುದು ತಪ್ಪು, ಹಾಗಾಗಿ ಈ ಹೇಳಿಕೆಯನ್ನು ತೆಗೆದುಹಾಕಬೇಕು ಅಂತಲೂ ಸರ್ಕಾರ ತನ್ನ ಮೇಲ್ಮನವಿಯಲ್ಲಿ ಒತ್ತಾಯಿಸಿತ್ತು.
ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ನ ಏಕಸದಸ್ಯ ಪೀಠ, ವಿಜಿಲೆನ್ಸ್ ಕೋರ್ಟ್ನ ಆಕ್ಷೇಪಾರ್ಹ ಹೇಳಿಕೆಗಳನ್ನು ತೆಗೆದುಹಾಕಲು ಒಪ್ಪಿಗೆ ಸೂಚಿಸಿತು. ಆದರೆ, ತಂತ್ರಿಯ ಜಾಮೀನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮೌಖಿಕವಾಗಿ ತಿಳಿಸಿದೆ. ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ