ಹಿಂದಿನ ವರ್ಷಗಳಲ್ಲಿ ವಿಜಯಪುರ, ಮಂಗಳೂರು, ಶಿವಮೊಗ್ಗ ಮುಂತಾದ ಕಡೆಗಳಲ್ಲಿ ನಾವು ಮಳಿಗೆ ಹಾಕುತ್ತಿದ್ದೆವು. ಈ ಬಾರಿ ನಮ್ಮ ಗುಣಮಟ್ಟದ ಉತ್ಪನ್ನಗಳನ್ನು ಉತ್ತರ ಭಾರತದವರಿಗೆ ಪರಿಚಯಿಸಲೆಂದೇ ನವದೆಹಲಿಗೆ ಬಂದಿದ್ದೇವೆ. ಸಾಂಪ್ರದಾಯಿಕ ಕಸೂತಿಯ ಮೂಲಸ್ವರೂಪವನ್ನು ಹಾಗೆಯೇ ಉಳಿಸಿಕೊಂಡು, ಆಧುನಿಕತೆಯ ಸ್ಪರ್ಶವನ್ನು ಕೊಡಲಾಗಿದೆ. ಈ ಉಪಕ್ರಮದಡಿ ವಿಜಯಪುರ ಜಿಲ್ಲೆಯಲ್ಲಿ 120 ಬಂಜಾರ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, ಇದು ಒಳ್ಳೆಯ ಫಲ ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.