ಕೇರಳದಲ್ಲಿ ಬೋಟ್‌ ಮಗುಚಿ 22 ಮಂದಿ ದುರ್ಮರಣ: ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯ; ಅಪ್ಡೇಟ್ಸ್‌ ಇಲ್ಲಿದೆ..

Published : May 08, 2023, 03:20 PM IST

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರ್ ಬಳಿಯ ಒಟ್ಟುಂಬರಂನಲ್ಲಿ ಭಾನುವಾರ ರಾತ್ರಿ 40 ಪ್ರವಾಸಿಗರೊಂದಿಗೆ ಪ್ರವಾಸಿ ದೋಣಿ ಮುಳುಗಿದ ಘಟನೆ ವರದಿಯಾಗಿದೆ. ಈ ಅವಘಡದಲ್ಲಿ ಹೌಸ್‌ಬೋಟ್‌ನಲ್ಲಿದ್ದ ಮಕ್ಕಳು ಸೇರಿ 22 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು ಹಲವರನ್ನು ಮೇಲೆತ್ತಲಾಗುತ್ತಿದೆ. ಈ ಹಿನ್ನೆಲೆ ಭಾರತೀಯ ನೌಕಾ ಪಡೆ ಸಹ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ . 

PREV
12
ಕೇರಳದಲ್ಲಿ ಬೋಟ್‌ ಮಗುಚಿ 22 ಮಂದಿ ದುರ್ಮರಣ: ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯ; ಅಪ್ಡೇಟ್ಸ್‌ ಇಲ್ಲಿದೆ..

ಘಟನೆ ನಡೆದ ಸ್ಥಳದಲ್ಲಿ ಪ್ರಾಥಮಿಕ ವೈಮಾನಿಕ ಸಮೀಕ್ಷೆ ನಡೆಸಲಾಯಿತು. ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಡೈವಿಂಗ್ ತಂಡದೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ನೌಕಾಪಡೆಯ ಹೆಲಿಕಾಪ್ಟರ್‌ಗಳ ಬಹು ವಿಧಗಳನ್ನು ಪ್ಲ್ಯಾನ್‌ ಮಾಡಲಾಗಿದೆ.

22

ಸಂಜೆ 5 ಗಂಟೆ ಬಳಿಕ ಇಂಥ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ನಿಷೇಧವಿದ್ದರೂ 2 ಅಂತಸ್ತು ಹೊಂದಿರುವ, ಕೇವಲ 2 ಬಾಗಿಲು ಹೊಂದಿರುವ ಹೌಸ್‌ಬೋಟ್‌ ಕಾರ್ಯಾಚರಣೆ ನಡೆಸುತ್ತಿತ್ತು. ಬೋಟ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದ ಕಾರಣ ಸಂಜೆ 6.30ರ ವೇಳೆಗೆ ಏಕಾಏಕಿ ಬೋಟ್‌ ಮಗುಚಿಕೊಂಡು ದುರ್ಘಟನೆ ಸಂಭವಿಸಿದೆ.

Read more Photos on
click me!

Recommended Stories