ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಕುರಿತಾಗಿ ಮಾತನಾಡಿದ ಜೈಶಂಕರ್, "ವ್ಯಾಪಾರ ಮಾತುಕತೆಗಳು ಮುಂದುವರಿಯುತ್ತಿವೆ. ಇವು ಸಂಕೀರ್ಣವಾಗಿವೆ ಮತ್ತು ಅಂತಿಮ ನಿರ್ಣಯಕ್ಕೆ ಬರುವವರೆಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದರು. ಯಾವುದೇ ವ್ಯಾಪಾರ ಒಪ್ಪಂದವು ಪರಸ್ಪರ ಲಾಭದಾಯಕವಾಗಿರಬೇಕು. ಎರಡೂ ದೇಶಗಳ ಹಿತಾಸಕ್ತಿಗೆ ಅನುಕೂಲವಾಗಬೇಕು ಎಂಬುದನ್ನು ಒತ್ತಿಹೇಳಿದರು. ವಿದೇಶಾಂಗ ನೀತಿಯಲ್ಲಿ ಭಾರತ ಇಂದು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ತೋರಿಸುತ್ತಿದ್ದು, ಪಾಕಿಸ್ತಾನ ಮತ್ತು ಇತರ ರಾಷ್ಟ್ರಗಳೊಂದಿಗೆ ಸಂಬಂಧಗಳಿಲ್ಲದೆ ವ್ಯಾಪಾರದ ಬಗ್ಗೆ ಸಮಗ್ರ ನಿಲುವು ಹೊಂದಿದೆ. ಪಾಕಿಸ್ತಾನದೊಂದಿಗೆ ಸಂವಾದಕ್ಕೆ ಹೊರಟರೆ, ಅದು ಕೇವಲ ಭಯೋತ್ಪಾದನೆ ನಿಲ್ಲಿಸುವ ಕುರಿತಾದ ಚರ್ಚೆ ಆಗಿರಬೇಕು ಎಂಬುದನ್ನು ಜೈಶಂಕರ್ ಅವರು ಬಹಳ ಸ್ಪಷ್ಟವಾಗಿ ಹೇಳಿದಂತಾಗಿದೆ.