ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ, ‘ಕರ್ನಾಟಕದಲ್ಲಿ ಏನಾಗಿದೆಯೇ ಅದು ದುರದೃಷ್ಟಕರ. ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯದವರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತದೆ. ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವ ಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಅಜೆಂಡಾದ ಭಾಗವಾಗಿದೆ.