ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

First Published Aug 21, 2021, 12:12 AM IST

ಬೆಂಗಳೂರು(ಆ. 20)  ಕೇಂದ್ರದ ಕೌಶಲ್ಯಾಭಿವೃದ್ದಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸಿಎಂ  ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಬೆಂಗಳೂರಿನ ಕೋರಮಂಗಲ ನಿವಾಸಕ್ಕೆ ತೆರಳಿದ ಬೊಮ್ಮಾಯಿ ಮಾತುಕತೆ ನಡೆಸಿದರು. ರಾಜೀವ್ ಚಂದ್ರೇಶೇಖರ್ ಅವರನ್ನ‌ ಸೌಹಾರ್ದಯುತ ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಜನಾಶೀರ್ವಾದ ಕೈಗೊಂಡಿದ್ದ ರಾಜೀವ್ ಚಂದ್ರಶೇಖರ್ ಜತೆ ಮಾತನಾಡಿದರು.

ಕೇಂದ್ರ ಸಚಿವರು ಮತ್ತು ಸಿಎಂ ಭೇಟಿ ಸಂದರ್ಭದಲ್ಲಿ ಸಚಿವ ಡಾ.  ಸುಧಾಕರ್ ಸಹ ಉಪಸ್ಥಿತರಿದ್ದರು.  ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯಕ್ಕೆ ಆಗಮಿಸಿದ ಸಚಿವರು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರದ ಕೌಶಲ್ಯಾಭಿವೃದ್ದಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸಿಎಂ  ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಬೆಂಗಳೂರಿನ ಕೋರಮಂಗಲ ನಿವಾಸಕ್ಕೆ ತೆರಳಿದ ಬೊಮ್ಮಾಯಿ ಮಾತುಕತೆ ನಡೆಸಿದರು.

ಸಿಎಂ ಬಸವರಾಜ್ ಬೊಮ್ಮಾಯಿ  ಅವರನ್ನು ಬೆಂಗಳೂರು ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಸಿಹಿ ನೀಡಿದರು. 

click me!