ಜುಲೈ 16 ರಂದು ನಿಮಿಷಾ ಅವರ ಮರಣದಂಡನೆ ಜಾರಿಯಾಗಲಿದೆ ಎಂಬ ಮಾಹಿತಿ ಇದೆ. ಈ ಸಂದರ್ಭದಲ್ಲಿ ನಿಮಿಷಾ ಪ್ರಿಯಾ ಅವರ ಪ್ರಾಣ ಉಳಿಸಲು ತುರ್ತಾಗಿ ಮಧ್ಯಪ್ರವೇಶಿಸಬೇಕು. ಕೇಂದ್ರ ಸರ್ಕಾರದ ಪರಿಣಾಮಕಾರಿ ಮಧ್ಯಪ್ರವೇಶದಿಂದ ಮಾತ್ರ ಇದು ಸಾಧ್ಯ ಎಂದು ಸೇವ್ ನಿಮಿಷಾ ಪ್ರಿಯಾ ಆಕ್ಷನ್ ಕೌನ್ಸಿಲ್ ಅರ್ಜಿ ಸಲ್ಲಿಸಿದೆ.
ಅರ್ಜಿಯನ್ನು ತುರ್ತಾಗಿ ಪರಿಗಣಿಸಬೇಕು ಮತ್ತು ಕೆಲವೇ ದಿನಗಳು ಮಾತ್ರ ಉಳಿದಿವೆ ಎಂದು ಹಿರಿಯ ವಕೀಲ ರಾಘವೇಂದ್ರ ಬಸಂತ್, ವಕೀಲ ಕೆ.ಆರ್. ಸುಭಾಷ್ ಚಂದ್ರನ್ ಅವರು ಸುಪ್ರೀಂ ಕೋರ್ಟ್ ಪೀಠದ ಮುಂದೆ ಸ್ಪಷ್ಟಪಡಿಸಿದ್ದಾರೆ.