ಕುಂಭಮೇಳ ವೈರಲ್ ಹುಡುಗಿ ಮದುವೆ ವಯಸ್ಸಿನ ವಿವಾದದಲ್ಲಿ ಹೊಸ ತಿರುವು! ಕೇರಳ ಪೊಲೀಸರ ತನಿಖೆ

Published : Apr 12, 2026, 07:07 PM IST

ಕುಂಭಮೇಳದ ಫೋಟೋದಿಂದ ವೈರಲ್ ಆಗಿದ್ದ ಹುಡುಗಿಯ ಮದುವೆ ವಿವಾದಕ್ಕೆ ತಿರುಗಿದೆ. ಆಕೆ ಅಪ್ರಾಪ್ತೆ ಎಂದು ರಾಷ್ಟ್ರೀಯ ಆಯೋಗ ಹೇಳಿದರೆ, ಮದುವೆಗೆ ನೀಡಿದ್ದ ಆಧಾರ್ ಕಾರ್ಡ್ ಅಸಲಿ ಎಂದು ಕೇರಳ ಪೊಲೀಸ್ ವರದಿ ತಿಳಿಸಿದೆ. ಈ ವಯಸ್ಸಿನ ಗೊಂದಲದಿಂದಾಗಿ ಆಕೆಯ ಪತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

PREV
15
ಕುಂಭಮೇಳ ವೈರಲ್ ಹುಡುಗಿ ಮದುವೆ ಮತ್ತು ವಯಸ್ಸು

ತಿರುವನಂತಪುರ: ಕುಂಭಮೇಳದ ಫೋಟೋದಿಂದ ವೈರಲ್ ಆಗಿದ್ದ ಹುಡುಗಿಯ ಮದುವೆ ವಿವಾದದಲ್ಲಿ, ಕೇರಳ ಪೊಲೀಸರ ಕಡೆಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಪೊಲೀಸ್ ವರದಿಯಲ್ಲಿ ಹೇಳಲಾಗಿದೆ. ಮದುವೆ ಸಮಯದಲ್ಲಿ ಹುಡುಗಿ ಕೊಟ್ಟಿದ್ದ ಆಧಾರ್ ಕಾರ್ಡ್ ಅಸಲಿಯಾಗಿದೆ ಅಂತ ಪೊಲೀಸರು ಪತ್ತೆ ಹಚ್ಚಿದ್ದಾರೆ.

25
ವಯಸ್ಸು ಎಷ್ಟು?

UIDAI ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ಇದನ್ನ ಖಚಿತಪಡಿಸಿಕೊಂಡಿದ್ದಾರೆ ಅಂತ ವರದಿಯಲ್ಲಿ ತಿಳಿಸಲಾಗಿದೆ. ಇದೇ ಆಧಾರ್ ನಂಬರ್ ಆಕೆಯ ಜನ್ಮ ಪ್ರಮಾಣಪತ್ರದಲ್ಲೂ ಇದೆ. ಆದರೆ, ಜನ್ಮ ಪ್ರಮಾಣಪತ್ರವನ್ನು ದೃಢೀಕರಿಸಲು ಯಾವುದೇ ವ್ಯವಸ್ಥೆ ಇಲ್ಲ ಅಂತಾನೂ ವರದಿಯಲ್ಲಿ ವಿವರಿಸಲಾಗಿದೆ. ಈ ವರದಿಯನ್ನು ಡಿಜಿಪಿಗೆ ಹಸ್ತಾಂತರಿಸಲಾಗಿದೆ. ಇದೇ ತಿಂಗಳ 22ರಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮುಂದೆ ಡಿಜಿಪಿ ಹಾಜರಾಗಬೇಕಿದೆ.

35
ಪೋಕ್ಸೋ ಪ್ರಕರಣ ದಾಖಲು

ಈ ವೈರಲ್ ಹುಡುಗಿಯ ಮದುವೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಮದುವೆ ಸಮಯದಲ್ಲಿ ಹುಡುಗಿಗೆ 18 ವಯಸ್ಸು ಆಗಿರಲಿಲ್ಲ ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಪತ್ತೆ ಹಚ್ಚಿತ್ತು. ಇದರ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸರು ಆಕೆಯ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಕಳೆದ ಮಾರ್ಚ್ 11 ರಂದು ತಿರುವನಂತಪುರದ ಅರುಮಾನೂರ್ ಶ್ರೀ ನೈನಾರ್ ದೇವ ದೇವಸ್ಥಾನದಲ್ಲಿ ಈ ಮದುವೆ ನಡೆದಿತ್ತು.

45
16 ವರ್ಷ 2 ತಿಂಗಳು

ಮದುವೆ ವೇಳೆ ಹುಡುಗಿಗೆ ಕೇವಲ 16 ವರ್ಷ 2 ತಿಂಗಳು ವಯಸ್ಸಾಗಿತ್ತು ಎಂದು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹೇಳಿದೆ. ಮದುವೆಗಾಗಿ ನಕಲಿ ಜನ್ಮ ಪ್ರಮಾಣಪತ್ರ ಸೃಷ್ಟಿಸಲಾಗಿದೆ ಅಂತಾನೂ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಸಂಬಂಧ ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿ ಮನೆಯಲ್ಲಿ ರೊಟ್ಟಿ ಮಾಡಿದ್ರೆ ಸಿಗತ್ತೆ 24 ಲಕ್ಷ ರೂ. ಸಂಬಳ: ಇದೊಂದು ಕ್ವಾಲಿಫಿಕೇಷನ್​ ಇದ್ರೆ ಸಾಕು ನೋಡಿ

55
ಆಯೋಗ ಸೂಚನೆ

ಮಧ್ಯಪ್ರದೇಶದ ಆಸ್ಪತ್ರೆ ದಾಖಲೆಗಳ ಪ್ರಕಾರ, ಆ ಹುಡುಗಿ 2009ರ ಡಿಸೆಂಬರ್ 30ರಂದು ಜನಿಸಿದ್ದಾಳೆ. ಈ ಕಾರಣಕ್ಕಾಗಿಯೇ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕೇರಳ ಮತ್ತು ಮಧ್ಯಪ್ರದೇಶದ ಡಿಜಿಪಿಗಳು ದೆಹಲಿಯಲ್ಲಿ ಹಾಜರಾಗುವಂತೆ ಆಯೋಗ ಸೂಚನೆ ನೀಡಿದೆ.

ಇದನ್ನೂ ಓದಿ: Karna Serial: ಕರ್ಣನಿಗೆ ಠಕ್ಕರ್ ಕೊಡೋಕೆ ಬಂದ ಹ್ಯಾಂಡ್​ಸಮ್​ ಅರ್ಜುನ್​ ; ಗಗನ್ ಗ್ರ್ಯಾಂಡ್ ಎಂಟ್ರಿಗೆ ಕಿರಣ್‌ ರಾಜ್ ಶಾಕ್

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories