ಕೇಂದ್ರ ಗೃಹ ಸಚಿವರು ಸಾಂಕೇತಿಕ ಭೇಟಿ ನೀಡಿದರೆ, ಪ್ರಧಾನಿ ಅವರ ಮಾತು ಬಿಟ್ಟರೆ ಮಣಿಪುರದ ನೋವಿಗೆ ಇನ್ನೂ ಸ್ಪಂದಿಸಿಲ್ಲ. ರಾಜ್ಯಪಾಲರು ಸಹ ಸಾರ್ವಜನಿಕವಾಗಿ ಓಡಾಡಲು ಹೆಲಿಕಾಪ್ಟರ್ ಅವಲಂಬಿಸಿದ್ದಾರೆ. ಇದು ಇತ್ತಿಚೆಗೆ ಭಾರತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಾತಾವರಣವಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.
ಶನಿವಾರ ರಾತ್ರಿ ನಡೆದ ಹಿಂಸಾಚಾರದ ನಂತರ ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಬಿಷ್ಣುಪುರ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ, ಇಂಟರ್ನೆಟ್ ಹಾಗೂ ಮೊಬೈಲ್ ಡೇಟಾ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರಿಗೆ ಅನಾವಶ್ಯಕವಾಗಿ ಮನೆಬಿಟ್ಟು ಹೊರಬರಬೇಡಿ ಎಂಬಂತೆ ತೀವ್ರ ಸೂಚನೆ ನೀಡಲಾಗಿದೆ. ಮಣಿಪುರದ ಜನಾಂಗೀಯ ಸಂಘರ್ಷಗಳು ಮುಂದುವರಿದಿರುವ ಬೆನ್ನಲ್ಲೇ ಮತ್ತೆ ಪ್ರಜ್ಞೆ ಕಳೆದುಕೊಳ್ಳುವಂತಹ ಪರಿಸ್ಥಿತಿ ಮೂಡಿದೆ. ಇಂತಹ ಸಂದರ್ಭದಲ್ಲೂ ಪ್ರಧಾನ ಮಂತ್ರಿಯ ನಿರ್ಲಕ್ಷ್ಯ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಶಾಂತಿ ನೆಲೆಸಬೇಕೆಂದು ಜನ ಭಯಸುತ್ತಿದ್ದಾರೆ.