ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ: ಗಣ್ಯರ ಸಂತಾಪ

First Published Dec 30, 2022, 9:38 AM IST

ನವದೆಹಲಿ(ಡಿ.30):  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು(ಶುಕ್ರವಾರ) ಬೆಳಗಿನ ಜಾವ 3:30ಕ್ಕೆ ನಿಧನರಾಗಿದ್ದಾರೆ. ಹೀಗಾಗಿ ದೇಶಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್ ಅವರನ್ನ ಕೆಲವು ದಿನಗಳ ಹಿಂದೆ ಗುಜರಾತ್‌ನ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೀರಾಬೆನ್ ಮೋದಿ ಇಂದು ಕೊನೆಯುಸಿರೆಳೆದಿದ್ದಾರೆ. 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರ ಗೌರವಾನ್ವಿತ ಮಾತಾಜಿ ಹೀರಾ ಬಾ ಅವರ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ತಾಯಿ ಒಬ್ಬ ವ್ಯಕ್ತಿಯ ಜೀವನದ ಮೊದಲ ಸ್ನೇಹಿತ ಮತ್ತು ಶಿಕ್ಷಕ, ಯಾರನ್ನು ಕಳೆದುಕೊಳ್ಳುವ ನೋವು ನಿಸ್ಸಂದೇಹವಾಗಿ ವಿಶ್ವದ ದೊಡ್ಡ ನೋವು. ಕುಟುಂಬ ಪೋಷಣೆಗಾಗಿ ಹೀರಾ ಬಾ ಅವರು ಎದುರಿಸಿದ ಹೋರಾಟ ಎಲ್ಲರಿಗೂ ಮಾದರಿಯಾಗಿದೆ. ಅವರ ತ್ಯಾಗದ ತಪಸ್ವಿ ಜೀವನ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಇಡೀ ದೇಶವು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ನಿಂತಿದೆ. ಕೋಟಿ ಕೋಟಿ ಜನರ ಪ್ರಾರ್ಥನೆ ನಿಮ್ಮೊಂದಿಗಿದೆ. ಓಂ ಶಾಂತಿ ಅಂತ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂತಾಪ ಸೂಚಿಸಿದ್ದಾರೆ.

ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. 

ಆದರಣೀಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಪೂಜ್ಯ ಮಾತೃಶ್ರೀ ಶ್ರೀಮತಿ ಹೀರಾಬೆನ್ ಮೋದಿ ರವರು ವಿಧಿವಶರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಅತ್ಯಂತ ನಿಸ್ಪೃಹತೆ ಹಾಗೂ ಸಾರ್ಥಕತೆಯಿಂದ ಶತಮಾನ ಪೂರೈಸಿದ್ದ ಆ ಹಿರಿಯ ಜೀವಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ರವರೊಂದಿಗೆ ಇಡೀ ದೇಶ ನಿಂತಿದೆ, ಅವರ ದುಃಖದಲ್ಲಿ ಭಾಗಿಯಾಗಿದೆ. ಅವರ ಮಾತೃಶ್ರೀ ಅವರ ಚರಣಗಳಿಗೆ ನಮಿಸುತ್ತಾ, ಸಮಸ್ತ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಅಂತ ಮಾಜಿ ಸಿಎಂ ಬಿ..ಎಸ್‌. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ನೈತಿಕ ಪ್ರಜ್ಞೆ ಹಾಗೂ ಶಕ್ತಿಯ ದ್ಯೋತಕವಾಗಿದ್ದ ಅವರ ಶತಾಯುಷಿ ತಾಯಿ ಶ್ರೀಮತಿ ಹೀರಾಬೆನ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು  ಅವರ ಕುಟುಂಬ ವರ್ಗದವರಿಗೆ ಭಗವಂತ ದಯಪಾಲಿಸಲಿ ಎಂದು ಹಾರೈಸುತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಾಪ ಸೂಚಿಸಿದ್ದಾರೆ.

ನಮ್ಮ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಸಂತಾಪಗಳು. ಮೋದಿಜಿ ತನ್ನ ಪ್ರೀತಿಯ ಮತ್ತು ಸ್ಫೂರ್ತಿದಾಯಕ ತಾಯಿಯನ್ನು ಅಗಲಿದ ಮೇಲೆ ದೇಶವು ಅವರೊಂದಿಗೆ ದುಃಖಿಸುತ್ತದೆ ಮತ್ತು ಅಗಲಿದ ಆತ್ಮಕ್ಕಾಗಿ ಪ್ರಾರ್ಥಿಸುತ್ತದೆ ಅಂತ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಂತಾಪ ಸೂಚಿಸಿದ್ದಾರೆ.     

ಶ್ರೀಮತಿ ಹೀರಾಬೆನ್ ಮೋದಿ.ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ತನ್ನ ಪ್ರೀತಿಯ ತಾಯಿಯ ನಷ್ಟದ ಬಗ್ಗೆ ಮೋದಿಜಿ ಅವರ ಈ ದುಃಖದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಇಡೀ ಕುಟುಂಬದೊಂದಿಗೆ ಇವೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರ ನಿಧನದ ಬಗ್ಗೆ. ಅವರು ಪೂರ್ಣ ಜೀವನವನ್ನು ನಡೆಸಿದ ಶತಾಯುಷಿಯಾಗಿದ್ದರು, ಆದರೆ ಒಬ್ಬ ತಾಯಿ ತನ್ನ ಸುತ್ತಲೂ, ಶಾಶ್ವತವಾಗಿ, ಶಕ್ತಿ ತುಂಬಲು ಮತ್ತು ಲಂಗರು ಹಾಕಲು ಬಯಸುತ್ತಾರೆ. ದಃಖ ಭರಿಸುವ ಶಕ್ತಿ ಮೋದಿಯವರಿಗಿದೆ. ಓಂ ಶಾಂತಿ ಅಂತ ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ. 

click me!