ವಯನಾಡಿನಲ್ಲಿ ಭಾರೀ ಭೂಕುಸಿತ; ಮನೆ-ಚರ್ಚ್ ಸಂಪೂರ್ಣ ನಾಶ, ಮಣ್ಣಿನಡಿ ಹಲವರು ಸಿಲುಕಿರೋ ಶಂಕೆ

Published : Jul 07, 2026, 01:06 PM IST

ವಯನಾಡಿನ ಕಲ್ಲಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಸೇತುವೆ, ಬಸ್ ನಿಲ್ದಾಣ ಸೇರಿದಂತೆ ಹಲವು ಕಟ್ಟಡಗಳು ನೆಲಸಮವಾಗಿವೆ. ಸುರಂಗ ಮಾರ್ಗದ ಕಾಮಗಾರಿ ಸ್ಥಳದಲ್ಲಿ ನಡೆದ ಈ ದುರಂತದಲ್ಲಿ ಹಲವು ಕಾರ್ಮಿಕರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

PREV
15
ವಯನಾಡಿನಲ್ಲಿ ಭೂಕುಸಿತ

ವಯನಾಡಿನಲ್ಲಿ ಭೂಕುಸಿತವಾದ ಸ್ಥಳದಲ್ಲಿ ಮತ್ತೆ ಭಾರೀ ಮಳೆ ಶುರುವಾಗಿದೆ. ಭೂಕುಸಿತವಾಗುತ್ತಿರುವ ಸ್ಥಳದಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಈ ಭಾಗದಲ್ಲಿ ಸುರಂಗ ಮಾರ್ಗಕ್ಕಾಗಿ ಅಗೆದ ಮಣ್ಣು ಕುಸಿತವಾಗಿದೆ ಎಂದು ವರದಿಯಾಗಿದೆ.

25
ಮಣ್ಣಿನಡಿ ಮುಚ್ಚಿದ ಬಸ್‌ ಸ್ಟ್ಯಾಂಡ್

ಮಣ್ಣುಕುಸಿತದಲ್ಲಿ ಒಂದು ಮನೆ ಮತ್ತು ಒಂದು ಚರ್ಚ್ ಸಂಪೂರ್ಣವಾಗಿ ನೆಲಸಮವಾಗಿವೆ. ಸ್ಥಳದಲ್ಲಿದ್ದ ಬಸ್ ನಿಲ್ದಾಣ ಮತ್ತು ಸೇತುವೆಯೂ ಮಣ್ಣಿನಡಿ ಮುಚ್ಚಿಹೋಗಿದೆ. ಸುಮಾರು 15 ಕಾರ್ಮಿಕರು ಕ್ಯಾಬಿನ್ ಒಳಗೆ ಇದ್ದರು ಎಂಬ ಮಾಹಿತಿ ಸಿಕ್ಕಿದೆ.

35
6 ಕಾರ್ಮಿಕರ ರಕ್ಷಣೆ

ಈ ಜಾಗದಲ್ಲಿ ತಳ್ಳುಗಾಡಿ ಅಂಗಡಿ ನಡೆಸುತ್ತಿದ್ದ ಕುಟುಂಬವೂ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 6 ಕಾರ್ಮಿಕರನ್ನು ರಕ್ಷಿಸಿದ್ದು, ಮೇಪ್ಪಾಡಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರು ಜನರಲ್ಲಿ ಓರ್ವ ಕಾರ್ಮಿಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಾದವರೆಲ್ಲರೂ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ.

45
ಮೀನಾಕ್ಷಿ ಸೇತುವೆ

ವಯನಾಡಿನ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಈ ಭೂಕುಸಿತ ಸಂಭವಿಸಿದೆ. ವಯನಾಡು-ಕಲ್ಲಾಡಿ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲೇ ಈ ದುರ್ಘಟನೆ ನಡೆದಿದೆ. ಸೇತುವೆ ಪಕ್ಕದಲ್ಲಿದ್ದ ಬೆಟ್ಟವೇ ಕುಸಿದು ನಿರ್ಮಾಣ ಸ್ಥಳದ ಮೇಲೆ ಬಿದ್ದಿದೆ. ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಕಾರ್ಮಿಕರನ್ನು ಕರೆತಂದಿದ್ದ ಎರಡು ಬಸ್‌ಗಳು ಕೂಡ ಮಣ್ಣಿನಡಿ ಸಿಕ್ಕಿಹಾಕಿಕೊಂಡಿವೆ.

55
ರಕ್ಷಣಾ ಕಾರ್ಯ

ಭೂಕುಸಿತದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ತಕ್ಷಣ ವಯನಾಡಿಗೆ ತೆರಳುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಸಿಎಂ ವಿ.ಡಿ. ಸತೀಶನ್ ಅವರು ಜಿಲ್ಲೆಯ ಸಚಿವ ಟಿ. ಸಿದ್ದಿಕ್ ಅವರೊಂದಿಗೆ ತುರ್ತು ಸಭೆ ನಡೆಸಿದರು. ರಕ್ಷಣಾ ಕಾರ್ಯಾಚರಣೆಯ ಸಮನ್ವಯಕ್ಕಾಗಿ ಕೋಯಿಕ್ಕೋಡ್‌ನಲ್ಲಿರುವ ತಂಡಕ್ಕೂ ವಯನಾಡಿಗೆ ತಲುಪುವಂತೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳು ವಯನಾಡು ಜಿಲ್ಲಾಧಿಕಾರಿ ಜೊತೆಗೂ ಫೋನ್‌ನಲ್ಲಿ ಮಾತನಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories