ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಆಸ್ಪತ್ರೆಗೆ ಧಾವಿಸಿದರು. ನಿರ್ಲಕ್ಷ್ಯದ ಪ್ರಮಾಣವನ್ನು ನೋಡಿ ಹಾಗೂ ಅಮಾಯಕ ಮಕ್ಕಳು ಬೆಂಕಿಗೆ ಆಹುತಿಯಾದ ಬಳಿ ಸರ್ಕಾರ ಎಚ್ಚೆತ್ತುಕೊಂಡಿತು. ಅಷ್ಟರಲ್ಲಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಪೋಷಕರು ಗಾಬರಿಗೊಂಡು, ಆಸ್ಪತ್ರೆಯ ಮುಂದೆ ಜಮಾಯಿಸಿದರು.