
ನವದೆಹಲಿ(ಮೇ 06) ಪಲ್ಲವಿ ಶರ್ಮಾ ಈಕೆ ಯಾರು ಎಂಬುದು ನಿಮಗೆ ಗೊತ್ತಿಲ್ಲದೆ ಇರಬಹುದು. ಆದರೆ ಕರ್ನಲ್ ಅಶುತೋಶ್ ಶರ್ಮಾ ಈ ಹೆಸರನ್ನೆ ಕೇಳಿಯೇ ಇರುತ್ತೀರಿ. ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾದಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಪತ್ನಿ.
ಪಲ್ಲವಿ ಶರ್ಮಾ ಸಹ ಈಗ ದೇಶ ಸೇವೆ ಮಾಡಲು ಭಾರತೀಯ ಸೈನ್ಯ ಸೇರುತ್ತೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣಕ್ಕೆ ನನಗೆ ಸಾಧ್ಯವಾಗದಿದ್ದರೆ ನನ್ನ ಮಗಳನ್ನು ಸೇರಿಸುತ್ತೇನೆ ಎಂದು ಶಪಥ ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಮಿನಿಸ್ಟರಿಯೊಂದಿಗೂ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಯೋಧ ಪುತ್ರನ ಅಂತಿಮ ದರ್ಶನಕ್ಕೆ 2600 ಕಿಮೀ..ಲೆಕ್ಕವೇ ಅಲ್ಲ ಬಿಡಿ
ನಾನು ಸ್ವಯಂ ಪ್ರೇರಿತವಾಗಿ ಸೈನ್ಯ ಸೇರಲು ಬಯಸುತ್ತಿದ್ದೇನೆ. ಸಚಿವಾಲಯ ಅನುಮತಿ ನೀಡಿದರೆ ಸೈನ್ಯದ ಸಮವಸ್ತ್ರದಲ್ಲಿ ಇರುತ್ತೇನೆ ಎಂದು ಅಭಿಮಾನದ ಮಾತುಗಳನ್ನೇ ಆಡುತ್ತಾರೆ.
ಒತ್ತೆ ಇಟ್ಟುಕೊಂಡಿದ್ದ ಸ್ಥಳೀಯರನ್ನು ಉಗ್ರರ ಕೈನಿಂದ ಬಿಡಿಸಲು ಹೋದಾಗ ವೀರ ಯೋಧ ದೇಶಕ್ಕಾಗಿ ಪ್ರಾಣ ನೀಡಿದ್ದರು.
ರಾಷ್ಟ್ರೀಯ ರೈಫಲ್ಸ್ 21 ನ್ನು ಶರ್ಮಾ ಮುನ್ನಡೆಸುತ್ತಿದ್ದರು. ಇದೇ ವೇಳೆ ಲಷ್ಕರ್ ಇ ತೋಯ್ಬಾ ಸಂಘಟನೆಯ ಉಗ್ರರನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿತ್ತು.
ಶರ್ಮಾ ಅವರಿಗೆ 11 ವರ್ಷದ ಮಗಳಿದ್ದಾರೆ. ಉತ್ತರ ಪ್ರದೇಶ ಮೂಲದ ಕುಟುಂಬ ಜೈಪುರದಲ್ಲಿ ವಾಸವಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ಯೋಧನಿಗೆ ಮಂಗಳವಾರ ಅಂತಿಮ ನಮನ ಸಲ್ಲಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ