ಅಯೋಧ್ಯೆ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರ ಸ್ವಾಮೀಜಿ

Published : Jul 01, 2021, 08:32 PM ISTUpdated : Jul 01, 2021, 08:33 PM IST

ಉಡುಪಿ/ ಅಯೋಧ್ಯೆ(ಜು.  01)    ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರಾಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಬುಧವಾರ ಆಯೋಧ್ಯೆಯ ಧರ್ಮನಗರಿಗೆ ಭೇಟಿ ನೀಡಿ, ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.

PREV
19
ಅಯೋಧ್ಯೆ ರಾಮಮಂದಿರ ಕಾಮಗಾರಿ ವೀಕ್ಷಿಸಿದ ಪೇಜಾವರ ಸ್ವಾಮೀಜಿ

 ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾದ ಮೇಲೆ ಅಯೋಧ್ಯೆಗೆ ಪೇಜಾವರ ಶ್ರೀಗಳು ಪ್ರಥಮ ಭೇಟಿ ನೀಡಿದ್ದಾರೆ.

 ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾದ ಮೇಲೆ ಅಯೋಧ್ಯೆಗೆ ಪೇಜಾವರ ಶ್ರೀಗಳು ಪ್ರಥಮ ಭೇಟಿ ನೀಡಿದ್ದಾರೆ.

29

ಪ್ರಸ್ತುತ ಅಲ್ಲಿ ರಾಮಮಂದಿರದ ತಳಹದಿ ತುಂಬಿಸುವ ಕಾಮಗಾರಿ ನಡೆಯುತ್ತಿದೆ.

ಪ್ರಸ್ತುತ ಅಲ್ಲಿ ರಾಮಮಂದಿರದ ತಳಹದಿ ತುಂಬಿಸುವ ಕಾಮಗಾರಿ ನಡೆಯುತ್ತಿದೆ.

39

 ಆರಂಭದಲ್ಲಿ ಶ್ರೀಗಳು  ಶ್ರೀರಾಮ ಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ  ದರ್ಶನ ಪಡೆದರು.

 ಆರಂಭದಲ್ಲಿ ಶ್ರೀಗಳು  ಶ್ರೀರಾಮ ಲಲ್ಲಾನ ತಾತ್ಕಾಲಿಕ ಗುಡಿಗೆ ತೆರಳಿದ  ದರ್ಶನ ಪಡೆದರು.

49

ವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಸಲ್ಲಿಸಿದರು. ಬಳಿಕ ಅಲ್ಲಿಂದ ಮಂದಿರ ಬುನಾದಿ ನಿರ್ಮಾಣ ಸ್ಥಳಕ್ಕೆ ತೆರಳಿ, ಅಲ್ಲಿ ನಡೆಯುತ್ತಿರುವ ಕಾಮಗಾರಿ ಪರಿವೀಕ್ಷಿಸಿದರು.

ವರಿಗೆ ಪುಷ್ಪಾರ್ಚನೆ ಮತ್ತು ಚಾಮರ ಸೇವೆ ಸಲ್ಲಿಸಿದರು. ಬಳಿಕ ಅಲ್ಲಿಂದ ಮಂದಿರ ಬುನಾದಿ ನಿರ್ಮಾಣ ಸ್ಥಳಕ್ಕೆ ತೆರಳಿ, ಅಲ್ಲಿ ನಡೆಯುತ್ತಿರುವ ಕಾಮಗಾರಿ ಪರಿವೀಕ್ಷಿಸಿದರು.

59

ಕಾಮಗಾರಿಯ ಇಂಜಿನಿಯರುಗಳು ಈವರೆಗೆ ನಡೆದ ಕಾಮಗಾರಿಯ ಪ್ರಗತಿಯ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕಾಮಗಾರಿಯ ಇಂಜಿನಿಯರುಗಳು ಈವರೆಗೆ ನಡೆದ ಕಾಮಗಾರಿಯ ಪ್ರಗತಿಯ ಸಂಪೂರ್ಣ ಮಾಹಿತಿಯನ್ನು ನೀಡಿದರು.

69

ಈ ವೇಳೆ ಟ್ರಸ್ಟ್‌ನ ಇನ್ನೊಬ್ಬ ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಅಧಿಕಾರಿಗಳು, ಪೇಜಾವರ ಶ್ರೀಗಳ ಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ ಮತ್ತು ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.

ಈ ವೇಳೆ ಟ್ರಸ್ಟ್‌ನ ಇನ್ನೊಬ್ಬ ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಮಂದಿರ ನಿರ್ಮಾಣ ಉಸ್ತುವಾರಿ ತಂಡದ ಗೋಪಾಲ ನಾಗರಕಟ್ಟೆ, ಮಂದಿರ ನಿರ್ಮಾಣ ಸಂಸ್ಥೆ ಎಲ್ ಆ್ಯಂಡ್ ಟಿ ಮತ್ತು ಮೇಲುಸ್ತುವಾರಿ ಸಂಸ್ಥೆ ಟಾಟಾ ಕನ್ಸಲ್ಟನ್ಸಿಯ ಅಧಿಕಾರಿಗಳು, ಪೇಜಾವರ ಶ್ರೀಗಳ ಕಾರ್ಯದರ್ಶಿಗಳಾದ ವಿಷ್ಣು ಆಚಾರ್ಯ ಮತ್ತು ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.

79

ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್,  ಖಜಾಂಚಿ ಸ್ವಾಮೀ ಶ್ರೀ ಗೋವಿಂದ ದೇವಗಿರಿ, ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಗೋಪಾಲ ನಾಗರಕಟ್ಟೆ ಅವರೊಂದಿಗೆ ಅನೌಪಚಾರಿಕ ಸಭೆ ನಡೆಸಿ ಮಂದಿರ ನಿರ್ಮಾಣದ ಪ್ರಗತಿಯ ಬಗ್ಗೆ ಚರ್ಚಿಸಿದರು. 

ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್,  ಖಜಾಂಚಿ ಸ್ವಾಮೀ ಶ್ರೀ ಗೋವಿಂದ ದೇವಗಿರಿ, ವಿಶ್ವಸ್ಥರಾದ ಡಾ.ಅನಿಲ್ ಮಿಶ್ರಾ, ಗೋಪಾಲ ನಾಗರಕಟ್ಟೆ ಅವರೊಂದಿಗೆ ಅನೌಪಚಾರಿಕ ಸಭೆ ನಡೆಸಿ ಮಂದಿರ ನಿರ್ಮಾಣದ ಪ್ರಗತಿಯ ಬಗ್ಗೆ ಚರ್ಚಿಸಿದರು. 

89

ಸುಪ್ರೀಂ ಕೋರ್ಟ್ ಆದೇಶದ ನಂತರದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಸುಪ್ರೀಂ ಕೋರ್ಟ್ ಆದೇಶದ ನಂತರದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ.

99

ಕೆಲ ದಿನಗಳ ಹಿಂದೆ ರಾಮಮಂದಿರ ತಳಪಾಯದ ಕೆಲಸದ ವಿವರವನ್ನು ಟ್ರಸ್ಟ್ ನೀಡಿತ್ತು. 

ಕೆಲ ದಿನಗಳ ಹಿಂದೆ ರಾಮಮಂದಿರ ತಳಪಾಯದ ಕೆಲಸದ ವಿವರವನ್ನು ಟ್ರಸ್ಟ್ ನೀಡಿತ್ತು. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories