ಪ್ರಧಾನಿ ನರೇಂದ್ರ ಮೋದಿ ಕೇರಳ ಪ್ರವಾಸದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಐಎನ್ಎಸ್ ವಿಕ್ರಾಂತ್ನ್ನು ನೌಕಾಪಡಗೆ ನಿಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗಾಗಿ ಮೋದಿ ಕೇರಳದಲ್ಲಿ ಬೀಡುಬಿಟ್ಟಿದ್ದಾರೆ. ಕೊಚ್ಚಿಗೆ ಆಗಮಿಸಿದ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಿದರು. ಬಳಿಕ ಆದಿ ಶಂಕರಾಚಾರ್ಯರ ಜನ್ಮಸ್ಥಳಕ್ಕೆ ಬೇಟಿ ನೀಡಿದರು. ಈ ವೇಳೆ ಭಾರಿ ಮಳೆ ಸುರಿಯುತ್ತಿದ್ದು, ಮಳೆಯನ್ನು ಲೆಕ್ಕಿಸದೆ ಜನರು ಮೋದಿಗೆ ಸ್ವಾಗತ ನೀಡಿದರು.