ತೀವ್ರ ಪ್ರತಿಭಟನೆ ನಡುವೆ ರೈತರನ್ನುದ್ದೇಶಿ ಮೋದಿ ಭಾಷಣ; ಮಹತ್ವದ ಘೋಷಣೆ ಸಾಧ್ಯತೆ!

First Published Dec 17, 2020, 8:18 PM IST

ಕೇಂದ್ರ ಕೃಷಿ ಮಸೂದೆಗಳನ್ನು ಹಿಂಪಡೆಯಲು ರೈತರು ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ನವೆಂಬರ್ 26 ರಿಂದ ಆರಂಭಗೊಂಡಿರುವ ಪ್ರತಿಭಟನೆ ಸದ್ಯಕ್ಕೆ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ರೈತರು ಪಟ್ಟು ಬಿಡುತ್ತಿಲ್ಲ, ಕೇಂದ್ರ ಮಸೂದೆ ವಾಪಸ್ ಪಡೆಯುತ್ತಿಲ್ಲ. ಹೀಗಾಗಿ ಪ್ರತಿಭಟನೆ ತೀವ್ರಗೊಂಡಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ, ರೈತರನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಇಷ್ಟೇ ಅಲ್ಲ ಮಹತ್ವದ ಘೋಷಣೆ ನೀಡುವ ಸಾಧ್ಯತೆ ಇದೆ.

ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ನಿರಂತರ ಪ್ರತಿಭಟನೆ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೆವ ಚಳಿಯಲ್ಲೂ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.
undefined
ಕೇಂದ್ರದ 3 ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ನಡುವೆ ಇದೀಗ ಪ್ರಧಾನಿ ನರೇಂದ್ರ ಮೋದಿ ರೈತರನ್ನುದ್ದೇಶಿ ಮಹತ್ವದ ಭಾಷಣ ಮಾಡಲಿದ್ದಾರೆ.
undefined
ಮಧ್ಯ ಪ್ರದೇಶದ 23,000 ಹಳ್ಳಿಗಳ ರೈತರನ್ನುದ್ದೇಶಿ ಮೋದಿ ಭಾಷಣ ಮಾಡಲಿದ್ದಾರೆ. ನಾಳೆ(ಡಿ.18) ಮಧ್ಯಾಹ್ನ 2 ಗಂಟೆಗೆ ಮೋದಿ ಭಾಷಣದ ವಿಡಿಯೋ ಮಧ್ಯಪ್ರದೇಶದ ಹಳ್ಳಿಗಳಲ್ಲಿ ಪ್ರಸಾರವಾಗಲಿದೆ.
undefined
ಮಧ್ಯಪ್ರದೇಶದ 23,000 ಹಳ್ಳಿಗಳ ರೈತರನ್ನುದ್ದೇಶಿ ಮೋದಿ ಭಾಷಣ ಇದೀಗ ತೀವ್ರ ಕುತೂಹಲ ಕೆರಳಿಸಿದೆ. ರೈತ ಪ್ರತಭಟನೆ, ಕೇಂದ್ರ ಕೃಷಿ ಕಾಯ್ದೆ ಕುರಿತು ಮೋದಿ ಮಾತನಾಡುವ ಸಾಧ್ಯತೆ ಇದೆ.
undefined
ರೈತ ಪ್ರತಿಭಟನೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸಮಿತಿ ರಚಿಸುವ ಸಲಹೆ ನೀಡಿದೆ. ಇಷ್ಟೇ ಅಲ್ಲ ರೈತರ ಪ್ರತಿಭಟನೆ ಹಕ್ಕನ್ನು ಕಸಿದುಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
undefined
ರೈತರಿಗೆ ಪ್ರತಿಭಟಿಸು ಹಕ್ಕಿದೆ. ಆದರೆ ರಸ್ತೆ ತಡೆಯಿಂದ ಹಲವರು ಹಸಿವಿನಿಂದ ಬಳಲುವ ಸಾಧ್ಯತೆ ಇದೆ. ಹೀಗಾಗಿ ರಸ್ತೆ ತಡೆಗೆ ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ.
undefined
ನವೆಂಬರ್ 26 ರಿಂದ ರೈತರು ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡರ ಜೊತೆ ಕೇಂದ್ರ ಸರ್ಕಾರ ಹಲವು ಸುತ್ತಿನ ಮಾತುಕತೆಗಳು ನಡೆಸಿದೆ.
undefined
ಕೇಂದ್ರದ ಮಾತುಕತೆಗಳು ಫಲಪ್ರದವಾಗಿಲ್ಲ. ಕೇಂದ್ರ ಸರ್ಕಾರ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದೆ. ಆದರೆ ರೈತರು 3 ಮಸೂದೆಗಳನ್ನು ಸಂಪೂರ್ಣ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
undefined
click me!