ಮೋದಿ-ರಾಹುಲ್ ಅಪರೂಪದ ಆತ್ಮೀಯ ಮಾತುಕತೆಯಲ್ಲಿ ಪ್ರಜಾಪ್ರಭುತ್ವದ ಸೌಂದರ್ಯ ಕಂಡ ನೆಟ್ಟಿಗರು

Published : Apr 11, 2026, 10:52 AM IST

ಮಹಾತ್ಮ ಜ್ಯೋತಿಬಾ ಫುಲೆ ಅವರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಆತ್ಮೀಯವಾಗಿ ಮಾತನಾಡಿಕೊಂಡರು. ರಾಜಕೀಯ ವೈರಿಗಳ ಈ ಅಪರೂಪದ ಕ್ಷಣವನ್ನು ನೆಟ್ಟಿಗರು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಶ್ಲಾಘಿಸಿದರು. ಇ

PREV
15
ಮೋದಿ-ರಾಹುಲ್ ನಡುವೆ ಆತ್ಮೀಯ ಮಾತುಕತೆ

ಮಹಾತ್ಮ ಜ್ಯೋತಿಬಾ ಫುಲೆ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖಾಮುಖಿಯಾದರು. ಸದಾ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿರುವ ಈ ಇಬ್ಬರು ನಾಯಕರು, ಮಹಾನ್ ಸುಧಾರಕನಿಗೆ ಹೂಗುಚ್ಛ ಅರ್ಪಿಸುವ ವೇಳೆ ಅತ್ಯಂತ ಆತ್ಮೀಯವಾಗಿ ಮತ್ತು ಮುಕ್ತವಾಗಿ ಮಾತನಾಡಿಕೊಂಡ ಕ್ಷಣ ಎಲ್ಲರ ಗಮನ ಸೆಳೆಯಿತು. ವಿವಿಧ ಪಕ್ಷಗಳ ನಾಯಕರು ಒಗ್ಗೂಡಿ ಫುಲೆ ಅವರಿಗೆ ನಮನ ಸಲ್ಲಿಸಿದರು.

25
ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದ ನೆಟ್ಟಿಗರು

ಸದಾಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ರಾಹುಲ್‌ ಗಾಂಧಿಗೆ, ಮೋದಿ ಕೂಡ ಸಾರ್ವಜನಿಕ ವೇದಿಕೆಯಲ್ಲಿ ಸಿಗುವ ಅವಕಾಶದಲ್ಲಿ ತಿರುಗೇಟು ನೀಡುತ್ತಿದ್ದರು. ಇವರಿಬ್ಬರು ಆತ್ಮೀಯವಾಗಿ ಮಾತನಾಡುವ ವಿಡಿಯೋ ಸಿಕ್ಕಿದ್ದು ಬಹಳ ಕಡಿಮೆ. ತೀರಾ ಅಪರೂಪ ಎನ್ನುವಂತೆ ಶನಿವಾರ ಈ ಕ್ಷಣ ಸಿಕ್ಕಿದ್ದು, ಇದು ದೇಶದ ಪ್ರಜಾಪ್ರಭುತ್ವದ ಸೌಂದರ್ಯ ಎಂದು ನೆಟ್ಟಿಗರು ಮೆಚ್ಚಿದ್ದಾರೆ.

35
200ನೇ ಜನ್ಮದಿನಾಚರಣೆಯ ಸಂಭ್ರಮ ಮತ್ತು ಪ್ರಧಾನಿ ಮೋದಿ ನಮನ

ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನಾಚರಣೆಯ ವರ್ಷಾಚರಣೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ, "ಜ್ಯೋತಿಬಾ ಫುಲೆ ಅವರು ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಆದರ್ಶಗಳಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದೂರದೃಷ್ಟಿಯ ಸಮಾಜ ಸುಧಾರಕ" ಎಂದು ಬಣ್ಣಿಸಿದ್ದಾರೆ. ಮಹಿಳೆಯರ ಮತ್ತು ತುಳಿತಕ್ಕೊಳಗಾದವರ ಹಕ್ಕುಗಳಿಗಾಗಿ ಹೋರಾಡಿದ ಅವರ ಆಲೋಚನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಎಕ್ಸ್ (X) ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

45
ಜ್ಯೋತಿಬಾ ಫುಲೆ: ಭಾರತಕ್ಕೆ ದಾರಿ ತೋರಿಸುವ ಬೆಳಕು

ಪ್ರಧಾನಿಯವರು ತಮ್ಮ ಬ್ಲಾಗ್‌ನಲ್ಲಿ ಫುಲೆ ಅವರ ಕೊಡುಗೆಗಳನ್ನು ಸ್ಮರಿಸುತ್ತಾ, "ಅವರು ಕೇವಲ ಸಂಸ್ಥೆಗಳನ್ನು ಕಟ್ಟಲಿಲ್ಲ ಅಥವಾ ಚಳುವಳಿಗಳನ್ನು ನಡೆಸಲಿಲ್ಲ; ಬದಲಾಗಿ ಕೋಟ್ಯಂತರ ಜನರಲ್ಲಿ ಆತ್ಮವಿಶ್ವಾಸ ಮತ್ತು ಆಶಾವಾದವನ್ನು ಮೂಡಿಸಿದರು" ಎಂದು ಬರೆದಿದ್ದಾರೆ. ಶಿಕ್ಷಣದ ಮೂಲಕ ಸಮಾಜವನ್ನು ಸಬಲೀಕರಣಗೊಳಿಸಬಹುದು ಎಂಬ ಫುಲೆ ಅವರ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿದೆ ಎಂದು ಮೋದಿ ಪ್ರತಿಪಾದಿಸಿದ್ದಾರೆ.

55
ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರಿಂದ ಗೌರವ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫುಲೆ ಅವರನ್ನು 'ಶಿಕ್ಷಣ ತಜ್ಞ' ಎಂದು ಕರೆದಿದ್ದು, 'ಸತ್ಯಶೋಧಕ ಸಮಾಜ'ದ ಮೂಲಕ ಅವರು ಸಮಾಜದಲ್ಲಿ ಸಮಾನತೆ ತರಲು ಮಾಡಿದ ಕೆಲಸ ಅಪಾರ ಎಂದು ಶ್ಲಾಘಿಸಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು "ಫುಲೆ ಅವರು ಭಾರತದ ಶೈಕ್ಷಣಿಕ ಕ್ರಾಂತಿಯ ಪಿತಾಮಹ ಮತ್ತು ದಲಿತರ ಏಳಿಗೆಗಾಗಿ ಹೋರಾಡಿದ ಬೌದ್ಧಿಕ ಕ್ರಾಂತಿಕಾರಿ ಸೂರ್ಯ" ಎಂದು ಗೌರವ ಸಲ್ಲಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories