ದುರಂತದಲ್ಲಿ ಮಡಿದ ಮಕ್ಕಳೆಷ್ಟು? ವಯನಾಡು ಸಂತ್ರಸ್ಥರ ಭೇಟಿಯಾಗಿ ಭಾವುಕರಾದ ಮೋದಿ!

Published : Aug 10, 2024, 04:40 PM ISTUpdated : Aug 10, 2024, 04:41 PM IST

ವಯನಾಡು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಭೂಕುಸಿದಿಂದ ಆಗಿರುವ ಹಾನಿ ಪರಿಶೀಲಿಸಿದ್ದಾರೆ. ಇದೇ ವೇಳೆ ದುರಂತದಲ್ಲಿ ಬದುಕುಳಿದವರು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

PREV
110
ದುರಂತದಲ್ಲಿ ಮಡಿದ ಮಕ್ಕಳೆಷ್ಟು? ವಯನಾಡು ಸಂತ್ರಸ್ಥರ ಭೇಟಿಯಾಗಿ ಭಾವುಕರಾದ ಮೋದಿ!

ಕೇರಳದ ಭೀಕರ ವಯನಾಡು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ದುರಂತ ಸ್ಥಳಗಳಿಗೆ ಬೇಟಿ ನೀಡಿದ ಮೋದಿ, ದುರಂತದ ಬೀಕರತೆಯನ್ನು ಪರಿಶೀಲಿಸಿದ್ದಾರೆ. 

210

ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕೈ ಪ್ರದೇಶಗಳಿಗೆ ಮೋದಿ  ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ. ಇಷ್ಟೇ ಅಲ್ಲ ಸಾವು ನೋವು ಮೋದಿಯನ್ನು ಭಾವುಕರನ್ನಾಗಿ ಮಾಡಿದೆ.

310

ನರೇಂದ್ರ ಮೋದಿ ಜೊತೆ ಕೇಂದ್ರ ಸಚಿವ, ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ, ಕೇರಳ ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ತೆರಳಿ ದುರಂತ ಸ್ಥಳದ ಮಾಹಿತಿ ನೀಡಿದರು.

410

ಭೂಕುಸಿತದಿಂದ ಪ್ರಾಣ ಕಳೆದುಕೊಂಡ ಗ್ರಾಮದ ನಿವಾಸಿಗಳ  ಕುರಿತು ಮಾಹಿತಿಯನ್ನು ಮೋದಿ ಪಡೆದುಕೊಂಡಿದ್ದರೆ. ಇದೇ ವೇಳೆ ಅಂದಾಜು ನಷ್ಟದ ಕುರಿತ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

510

ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ. 

610

ದುರಂತದಿಂದ ಆಪ್ತರನ್ನು ಕಳೆದುಕೊಂಡ ಜರ್ಝರಿತವಾಗಿರುವ ಕುಟುಂಬ ಸದಸ್ಯರ ಬೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

710

ವಯನಾಡಿನ ಸರ್ಕಾರಿ ಕೇಂದ್ರಗಳಲ್ಲಿ ಉಳಿದುಕೊಂಡಿರುವ ಹಲವರು ಮೋದಿ ಜೊತೆ ನೋವು ಹಂಚಿಕೊಂಡು ಭಾವುಕರಾಗಿದ್ದಾರೆ. ಇದೇ ವೇಳೆ ಘಟನೆ ಭೀಕರತೆಯನ್ನೂ ವಿವರಿಸಿದ್ದಾರೆ.

810

ಇದೇ ವೇಳೆ ಮೋದಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ತುರ್ತು ಸೇವೆ ಒದಗಿಸುವ ಮೂಲಕ ಅಮೂಲ್ಯ ನೆರವನ್ನು ಸ್ಮರಿಸಿದ್ದಾರೆ.

910

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ವಯನಾಡಿನ ದುರಂತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.

1010

ವೈಮಾನಿಕ ಸಮೀಕ್ಷೆ ವೇಳೆ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಸೇರಿದಂತೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದರು.
 

Read more Photos on
click me!

Recommended Stories