Published : Aug 10, 2024, 04:40 PM ISTUpdated : Aug 10, 2024, 04:41 PM IST
ವಯನಾಡು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಭೂಕುಸಿದಿಂದ ಆಗಿರುವ ಹಾನಿ ಪರಿಶೀಲಿಸಿದ್ದಾರೆ. ಇದೇ ವೇಳೆ ದುರಂತದಲ್ಲಿ ಬದುಕುಳಿದವರು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.
ಕೇರಳದ ಭೀಕರ ವಯನಾಡು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ದುರಂತ ಸ್ಥಳಗಳಿಗೆ ಬೇಟಿ ನೀಡಿದ ಮೋದಿ, ದುರಂತದ ಬೀಕರತೆಯನ್ನು ಪರಿಶೀಲಿಸಿದ್ದಾರೆ.
210
ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕೈ ಪ್ರದೇಶಗಳಿಗೆ ಮೋದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ. ಇಷ್ಟೇ ಅಲ್ಲ ಸಾವು ನೋವು ಮೋದಿಯನ್ನು ಭಾವುಕರನ್ನಾಗಿ ಮಾಡಿದೆ.
310
ನರೇಂದ್ರ ಮೋದಿ ಜೊತೆ ಕೇಂದ್ರ ಸಚಿವ, ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ, ಕೇರಳ ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ತೆರಳಿ ದುರಂತ ಸ್ಥಳದ ಮಾಹಿತಿ ನೀಡಿದರು.
410
ಭೂಕುಸಿತದಿಂದ ಪ್ರಾಣ ಕಳೆದುಕೊಂಡ ಗ್ರಾಮದ ನಿವಾಸಿಗಳ ಕುರಿತು ಮಾಹಿತಿಯನ್ನು ಮೋದಿ ಪಡೆದುಕೊಂಡಿದ್ದರೆ. ಇದೇ ವೇಳೆ ಅಂದಾಜು ನಷ್ಟದ ಕುರಿತ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
510
ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.
610
ದುರಂತದಿಂದ ಆಪ್ತರನ್ನು ಕಳೆದುಕೊಂಡ ಜರ್ಝರಿತವಾಗಿರುವ ಕುಟುಂಬ ಸದಸ್ಯರ ಬೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
710
ವಯನಾಡಿನ ಸರ್ಕಾರಿ ಕೇಂದ್ರಗಳಲ್ಲಿ ಉಳಿದುಕೊಂಡಿರುವ ಹಲವರು ಮೋದಿ ಜೊತೆ ನೋವು ಹಂಚಿಕೊಂಡು ಭಾವುಕರಾಗಿದ್ದಾರೆ. ಇದೇ ವೇಳೆ ಘಟನೆ ಭೀಕರತೆಯನ್ನೂ ವಿವರಿಸಿದ್ದಾರೆ.
810
ಇದೇ ವೇಳೆ ಮೋದಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ತುರ್ತು ಸೇವೆ ಒದಗಿಸುವ ಮೂಲಕ ಅಮೂಲ್ಯ ನೆರವನ್ನು ಸ್ಮರಿಸಿದ್ದಾರೆ.
910
ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ವಯನಾಡಿನ ದುರಂತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.
1010
ವೈಮಾನಿಕ ಸಮೀಕ್ಷೆ ವೇಳೆ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಸೇರಿದಂತೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ