ಭಾರತೀಯ ಸಂಸ್ಕೃತಿಯನ್ನು ವಿಶ್ವದ ಮುಂದೆ ಹೆಮ್ಮೆಯಿಂದ ಪ್ರಚುರ ಪಡಿಸಿ ಜನಪ್ರಿಯತೆಯನ್ನು ಹೆಚ್ಚಿಸಿರುವ ನಾಯಕ ಅಂದರೆ ಅದು ಪ್ರಧಾನಿ ನರೇಂದ್ರ ಮೋದಿ. ದೇಶದ ಯಾವುದೇ ಸ್ಥಳಕ್ಕೆ ತೆರಳಿದರೆ ಅಲ್ಲಿನ ವಸ್ತ್ರ, ಅಲ್ಲಿನ ಆಹಾರ, ಭಾಷೆ, ಪರಂಪರೆ, ಸಂಸ್ಕೃತಿಗಳಿಗೆ ಹೆಚ್ಚಿನ ಒತ್ತು ನೀಡುತ್ತಾರೆ. ಇದೀಗ ದಕ್ಷಿಣ ಪ್ರವಾಸದಲ್ಲಿರುವ ಮೋದಿ ಕೇರಳದ ಕೊಚ್ಚಿಗೆ ಬಿಳಿ ಪಂಚೆ, ಶರ್ಟ್ ಹಾಗೂ ಶಲ್ಯ ಹಾಕಿ ಆಗಮಿಸಿದರು.