ಉಡುಪಿಯಲ್ಲಿ ಪ್ರಣಬ್ ಪ್ರಯಾಣ, ವೈದ್ಯರ ಮೇಲಿನ ಹಲ್ಲೆ ಖಂಡಿಸಿದ್ದ ಇತಿಹಾಸ

First Published Aug 31, 2020, 9:11 PM IST

ಉಡುಪಿ(ಆ. 31)   ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಪ್ರಣಬ್ ಉಡುಪಿಯೊಂದಿಗೂ ನಿಕಟ ಬಾಂಧವ್ಯ ಇಟ್ಟುಕೊಂಡಿದ್ದರು  2017ರಲ್ಲಿ ಉಡುಪಿಯಲ್ಲಿ ಸರ್ಕಾರಿ - ಖಾಸಗಿ ಸಹಭಾಗಿತ್ವದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆಗೆ ಆಗಮಿಸಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ಹೆಚ್ಚುತ್ತಿರುವ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ವೈದ್ಯರ ಮೇಲೆ ಹಲ್ಲೆ ಯಾವುದೇ ನಾಗರಿಕ ಸಮಾಜದ ಲಕ್ಷಣವಲ್ಲ ಎಂದ ಅವರು ಯಾರೂ ಕೂಡ ಪರಿಪೂರ್ಣರಲ್ಲ, ವೈದ್ಯರು ಕೂಡ ಇದಕ್ಕೆ ಹೊರತಾಗಿಲ್ಲ, ವೈದ್ಯಕೀಯ ಆಕಸ್ಮಿಕಗಳಿಗೆ ವೈದ್ಯರನ್ನು ಹೊಣೆಗಾರನ್ನಾಗಿ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದರು.
undefined
ವೈದ್ಯರು ಮತ್ತು ರೋಗಿಗಳ ನಡುವೆ ಸಾಮರಸ್ಯ ಹೆಚ್ಚಬೇಕು, ಜೀವವನ್ನು ಉಳಿಸುವುದೇ ವೈದ್ಯರ ಧ್ಯೇಯವಾಗಬೇಕು ಎಂದು ವೈದ್ಯರಿಗೆ ಕಿವಿಮಾತು ಹೇಳಿದ್ದರು.
undefined
ಇದಕ್ಕೆ ಮೊದಲು ಪ್ರಣಬ್ ಮುಖರ್ಜಿ ಅವರು 1978ರಲ್ಲಿಮಾಜಿ ಪ್ರಧಾನಿ ಇಂದಿರಾಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಗೆ ಸ್ಪರ್ಧಿಸಿದ್ದಾಗಲೂ, ಉಡುಪಿಯಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು.
undefined
ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳೊಂದಿಗೆ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
undefined
ಉಡುಪಿಯ ಶ್ರೀಕೃಷ್ಣನ ದರ್ಶನ ಪಡೆದುಕೊಂಡಿದ್ದರು.
undefined
click me!