ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ ದೇಣಿಗೆ ನೀಡಿದ ರಾಷ್ಟ್ರಪತಿ!

Published : Jan 15, 2021, 03:58 PM ISTUpdated : Jan 15, 2021, 04:02 PM IST

ರಾಮ ಮಂದಿರ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಇದೀಗ ದೇಶಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಇದೀಗ ರಾಷ್ಟ್ರಪ್ರತಿ ರಾಮನಾಥ್ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ, ದೇಣಿಗೆ ಸಂಗ್ರಹ ವೇಗ ಹೆಚ್ಚಿಸಿದ್ದಾರೆ. ರಾಮನಾಥ್ ಕೋವಿಂದ್ ಜೊತೆಗೆ ದೇಣಿಗೆ ನೀಡಿದ ಇತರ ಕೆಲ ಮುಖ್ಯಮಂತ್ರಿಗಳು ದೇಣಿಗೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

PREV
18
ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ ದೇಣಿಗೆ ನೀಡಿದ ರಾಷ್ಟ್ರಪತಿ!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಜನವರಿ 13ರಂದು ಭಕ್ತರಿಂದ ದೇಣಿಕೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಜನವರಿ 13ರಂದು ಭಕ್ತರಿಂದ ದೇಣಿಕೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

28

ಇದೀಗ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ  ರಾಮಜನ್ಮಭೂಮಿ ಸಮಿತಿಗೆ 5 ಲಕ್ಷದ 100 ರೂಪಾಯಿ ದೇಣಿಗೆ ನೀಡಿದ್ದಾರೆ. 

ಇದೀಗ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ  ರಾಮಜನ್ಮಭೂಮಿ ಸಮಿತಿಗೆ 5 ಲಕ್ಷದ 100 ರೂಪಾಯಿ ದೇಣಿಗೆ ನೀಡಿದ್ದಾರೆ. 

38

ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು.

ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು.

48

ರಾಷ್ಟ್ರಪತಿ ಭಾರತದ ಮೊದಲ ಪ್ರಜೆ. ಇದೀಗ ರಾಮನಾಥ್ ಕೋವಿಂದ್ ಸ್ವತ 5 ಲಕ್ಷ ರೂಪಾಯಿ ದೇಣಿಗೆ ನೀಡೋ ಮೂಲಕ ದೇಣಿಕೆ ಸಂಗ್ರಹ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಿದ್ದಾರೆ ಎಂದರು.

ರಾಷ್ಟ್ರಪತಿ ಭಾರತದ ಮೊದಲ ಪ್ರಜೆ. ಇದೀಗ ರಾಮನಾಥ್ ಕೋವಿಂದ್ ಸ್ವತ 5 ಲಕ್ಷ ರೂಪಾಯಿ ದೇಣಿಗೆ ನೀಡೋ ಮೂಲಕ ದೇಣಿಕೆ ಸಂಗ್ರಹ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಿದ್ದಾರೆ ಎಂದರು.

58

ರಾಮನಾಥ್ ಕೋವಿಂದ್ ಮಾತ್ರವಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ದೇಣಿಕೆ ನೀಡಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ

ರಾಮನಾಥ್ ಕೋವಿಂದ್ ಮಾತ್ರವಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ದೇಣಿಕೆ ನೀಡಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ

68

ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.

ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.

78

ದೇಣಿಗೆ ಸಂಗ್ರಹ ಅಭಿಯಾನದಡಿ ಭಾರತದ ಬರೋಬ್ಬರಿ 4 ಲಕ್ಷ ಹಳ್ಳಿಗೆ ಸ್ವಯಂ ಸೇವಕರು, ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿಗೆ ದೇಣಿಗೆ ಸಂಗ್ರಹಿಸಲಿದ್ದಾರೆ.

ದೇಣಿಗೆ ಸಂಗ್ರಹ ಅಭಿಯಾನದಡಿ ಭಾರತದ ಬರೋಬ್ಬರಿ 4 ಲಕ್ಷ ಹಳ್ಳಿಗೆ ಸ್ವಯಂ ಸೇವಕರು, ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿಗೆ ದೇಣಿಗೆ ಸಂಗ್ರಹಿಸಲಿದ್ದಾರೆ.

88

ಆಸಕ್ತರು 10,100 ಹಾಗೂ 1000 ಮುಖಬೆಲೆಯ ಕೂಪನ್ ಪಡೆದು ದೇಣಿಗೆ ನೀಡಬಹುದು ಎಂದು ಸಮಿತಿ ಹೇಳಿದೆ. ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.

ಆಸಕ್ತರು 10,100 ಹಾಗೂ 1000 ಮುಖಬೆಲೆಯ ಕೂಪನ್ ಪಡೆದು ದೇಣಿಗೆ ನೀಡಬಹುದು ಎಂದು ಸಮಿತಿ ಹೇಳಿದೆ. ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories