ತಮಿಳುನಾಡಿನಲ್ಲಿ ಸನಾತನ ಧರ್ಮ ನಿರ್ಮೂಲನೆ ಕುರಿತ ಉದಯನಿಧಿ ಸ್ಟಾಲಿನ್ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಇದಕ್ಕೆ ಟಿವಿಕೆ ಶಾಸಕ ಮುಸ್ತಫಾ ಬೆಂಬಲ ಸೂಚಿಸಿದ್ದು, ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ರಾಜಕೀಯ ಸಂಘರ್ಷವು ರಾಜ್ಯದಲ್ಲಿ ಚರ್ಚೆಯ ಬಿರುಗಾಳಿಯನ್ನೇ ಎಬ್ಬಿಸಿದೆ.
ತಮಿಳುನಾಡಿನಲ್ಲಿ ಸನಾತನ ಧರ್ಮ ಕುರಿತ ಹೇಳಿಕೆಗಳು ರಾಜಕೀಯ ವಾತಾವರಣವನ್ನು ಮತ್ತೊಮ್ಮೆ ಕಾವು ಕೊಡುತ್ತಿವೆ. ತಮಿಳು ನಟ, ರಾಜಕೀಯ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಮಾತನಾಡಿ ಜನರನ್ನು ವಿಭಜಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಇತ್ತೀಚೆಗೆ ತಮಿಳುನಾಡು ಸದನದಲ್ಲೇ ಹೇಳಿದ್ದರು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ತಮಿಳು ನಟ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ ಕೂಡ ಬೆಂಬಲ ನೀಡಿದ್ದರು. ಇದೀಗ ಆಡಳಿತ ಪಕ್ಷವಾದ ಟಿವಿಕೆಯ ವಿ.ಎಂ.ಎಸ್. ಮುಸ್ತಫಾ ನೀಡಿದ ಹೇಳಿಕೆ ಹಾಗೂ ಅದಕ್ಕೆ ಬೆಂಬಲವಾಗಿ ವ್ಯಕ್ತವಾದ ಅಭಿಪ್ರಾಯಗಳು ಭಾರೀ ಚರ್ಚೆಗೆ ಕಾರಣವಾಗಿವೆ.
26
ಟಿವಿಕೆ ಶಾಸಕ ಮುಸ್ತಫಾ ಹೇಳಿಕೆಯಿಂದ ವಿವಾದ
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ವಿ.ಎಂ.ಎಸ್. ಮುಸ್ತಫಾ, ತಮ್ಮ ಪಕ್ಷವು ಪೆರಿಯಾರ್ ಇವಿ ರಾಮಸಾಮಿ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಅನುಸರಿಸುತ್ತಿದ್ದು ಸನಾತನ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವ ಹೋರಾಟಕ್ಕೆ ನಾವು ಕೂಡ ಪ್ರವೇಶಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಮಧುರೈ ಕೇಂದ್ರ ಕ್ಷೇತ್ರದಿಂದ ಆಯ್ಕೆಯಾದ ಮುಸ್ತಫಾ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಮಾಜದಲ್ಲಿ ಅಸಮಾನತೆ ಉಂಟುಮಾಡುವ ವ್ಯವಸ್ಥೆಗಳ ವಿರುದ್ಧ ಹೋರಾಡುವುದು ನಮ್ಮ ಉದ್ದೇಶ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ತಕ್ಷಣವೇ ರಾಜಕೀಯ ವಲಯದಲ್ಲಿ ಮಾತ್ರವಲ್ಲ ಇಡೀ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಯಿತು.
36
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬೆಂಬಲ
ಉದಯನಿಧಿ ಸ್ಟಾಲಿನ್ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬೆಂಬಲವಾಗಿ ಮುಸ್ತಫಾ ಅವರ ಹೇಳಿಕೆ ಇದೆ. ಉದಯನಿಧಿ ಸ್ಟಾಲಿನ್, “ಜನರನ್ನು ವಿಭಜಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು” ಎಂದು ತಮಿಳುನಾಡು ವಿಧಾನಸಭೆಯಲ್ಲಿ ಹೇಳಿದ್ದರು. ಅವರ ಈ ಹೇಳಿಕೆ ಈಗಾಗಲೇ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಮುಸ್ಲಿಂ ಸಮುದಾಯದ ನಾಯಕ ಮುಸ್ತಫಾ ಅವರು ಉದಯನಿಧಿ ಸ್ಟಾಲಿನ್ ಅವರು ಹೇಳಿಕೆಯನ್ನು ಬೆಂಬಲಿಸಿ ಮಾತನಾಡಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಈ ಹೇಳಿಕೆಗಳಿಗೆ ಭಾರತೀಯ ಜನತಾ ಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಕ್ತಾರರು ಹಾಗೂ ರಾಜ್ಯ ನಾಯಕರು, ಈ ಹೇಳಿಕೆಗಳು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತವೆ ಎಂದು ಆರೋಪಿಸಿದ್ದಾರೆ. ಕೆಲ ನಾಯಕರು ಇದನ್ನು “ವಿಭಜಕ ರಾಜಕೀಯ” ಎಂದು ಕರೆದಿದ್ದು, ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ತೆಲಂಗಾಣ ಉಪಾಧ್ಯಕ್ಷ ಶಾಂತಿ ಕುಮಾರ್, “ಟಿವಿಕೆ ತನ್ನ ನಿಜವಾದ ಕಾರ್ಯಸೂಚಿಯನ್ನು ಬಹಿರಂಗಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ. ಇನ್ನೂ ಕೆಲವು ನಾಯಕರು, “ಇಂತಹ ಹೇಳಿಕೆಗಳು ಇತರ ಧರ್ಮಗಳ ಬಗ್ಗೆ ಏಕೆ ಮಾಡಲಾಗುವುದಿಲ್ಲ?” ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.
56
ವಿಜಯ್ ಮೌನದ ಬಗ್ಗೆ ಪ್ರಶ್ನೆಗಳು
ಟಿವಿಕೆ ಪಕ್ಷದ ನಾಯಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಈ ವಿಚಾರದಲ್ಲಿ ಮೌನ ತಾಳಿರುವುದು ಕೂಡ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ಶಾಸಕರು ಇಂತಹ ಹೇಳಿಕೆ ನೀಡುತ್ತಿರುವಾಗ ವಿಜಯ್ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ? ಹಿಂದೂ ಮತಗಳಿಂದ ಅಧಿಕಾರಕ್ಕೆ ಬಂದ ನಂತರ ಈಗ ಪಕ್ಷದ ನಿಲುವು ಬದಲಾಗಿದೆಯೇ? ಎಂದು ಬಿಜೆಪಿ ನಾಯಕರು ಖಾರವಾಗಿ ಪ್ರಶ್ನಿಸಿದ್ದಾರೆ.
66
ತಮಿಳುನಾಡಿನಲ್ಲಿ ಮತ್ತೊಮ್ಮೆ ರಾಜಕೀಯ ಸಂಘರ್ಷ
ಒಟ್ಟಿನಲ್ಲಿ, ಸನಾತನ ಧರ್ಮ ಕುರಿತ ಹೇಳಿಕೆಗಳು ತಮಿಳುನಾಡಿನಲ್ಲಿ ಮತ್ತೊಮ್ಮೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಟಿವಿಕೆ ಹಾಗೂ ಡಿಎಂಕೆ ನಾಯಕರು ತಮ್ಮ ನಿಲುವುಗಳನ್ನು ಸಮರ್ಥಿಸಿಕೊಂಡರೆ, ಬಿಜೆಪಿ ಈ ವಿಷಯವನ್ನು ತೀವ್ರವಾಗಿ ವಿರೋಧಿಸುತ್ತಿದೆ. ಈ ವಿವಾದ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದ್ದು, ರಾಜ್ಯ ರಾಜಕೀಯದಲ್ಲಿ ಇದರ ಪರಿಣಾಮ ಹೇಗಿರುತ್ತದೆ ಎಂಬುದು ಗಮನಾರ್ಹವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ