K Annamalai: ನನಗೆ ಅದೆಲ್ಲಾ ಇಷ್ಟವಾಗಲ್ಲ ಪ್ಲೀಸ್: ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ

Published : Oct 18, 2025, 02:38 PM IST

K Annamalai request to fans: ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ  ಇಂತಹ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ತಮ್ಮ ಕುಟುಂಬದ ಕಡೆಗೆ ಗಮನ ಹರಿಸುವಂತೆ ಅಣ್ಣಾಮಲೈ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

PREV
15
ಅಣ್ಣಾಮಲೈ ವಿಶೇಷ ಮನವಿ

ತಮಿಳುನಾಡು ಬಿಜೆಪಿ ಘಟಕದ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ತಮ್ಮ ಹೆಸರನ್ನು ಈ ರೀತಿ ಬಳಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಏನಿದು ವಿಶೇಷ ಮನವಿ ಎಂಬುದರ ಮಾಹಿತಿ ಇಲ್ಲಿದೆ.

25
ಅಣ್ಣಾಮಲೈ ನರ್ಪಣಿ ಮಂಟ್ರಂ

ಅಣ್ಣಾಮಲೈ ಅವರ ಬೆಂಬಲಿಗರು ತಿರುನಲ್ವೇಲಿ ಪ್ರದೇಶದಲ್ಲಿ 'ಅಣ್ಣಾಮಲೈ ನರ್ಪಣಿ ಮಂಟ್ರಂ'('ಅಣ್ಣಾಮಲೈ ಚಾರಿಟಿ ಫೌಂಡೇಶನ್') ಆರಂಭಿಸಿದ್ದರು. ಈ ಚಾರಿಟಿ ಫೌಂಡೇಶನ್ ಲೋಗೋ ಮತ್ತು ಧ್ವಜ ಬಿಡುಗಡೆ ಮಾಡಲಾಗಿತ್ತು. ಈ ಚಾರಿಟಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ನೆಲ್ಲೈ ವೇಲ್ಕಣ್ಣನ್ ಎಂಬವರು ಈ ಚಾರಿಟಿಯ ಅಧ್ಯಕ್ಷರಾಗಿದ್ದರು. ನೆಲ್ಲೈ ವೇಲ್ಕಣ್ಣನ್ ಅವರೇ ಧ್ವಜ ಅನಾವರಣ ಮಾಡಿದ್ದರು.

35
ಚಾರಿಟಿ ಫೌಂಡೇಶನ್ ಆರಂಭ

ತಮ್ಮಿಂದ ಯಾವುದೇ ಅನುಮತಿ ಪಡೆಯದೇ, ತಮ್ಮ ಫೋಟೋ ಮತ್ತು ಹೆಸರಿನಲ್ಲಿ ಚಾರಿಟಿ ಫೌಂಡೇಶನ್ ಆರಂಭವಾಗಿರುವ ವಿಷಯ ಅಣ್ಣಾಮಲೈ ಅವರ ಗಮನಕ್ಕೆ ಬಂದಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಅಣ್ಣಾಮಲೈ ಕೆಲವೊಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಫೇಕ್ ಸರ್ಟಿಫಿಕೇಟ್ ಮೂಲಕ ಕಾಂಗ್ರೆಸ್ ಸರ್ಕಾರ ಸಮರ್ಥನೆ: ಸಿ.ಟಿ. ರವಿ ಆರೋಪ

45
ಅಣ್ಣಾಮಲೈ ಸ್ಪಷ್ಟನೆ

ತಿರುನಲ್ವೇಲಿಯಲ್ಲಿ ನನ್ನ ಹೆಸರಿನಲ್ಲಿ ನರ್ಪಣಿ ಮಂಟ್ರಂ ಸ್ಥಾಪಿಸಿ, ಧ್ವಜ ಪರಿಚಯಿಸಲಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನೀವು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಸದಾ ಋಣಿಯಾಗಿರುತ್ತೇನೆ. ಆದ್ರೆ ಇಂತಹ ಸಂಘ ಮತ್ತು ಧ್ವಜಗಳಿಗೆ ನನ್ನ ಒಪ್ಪಿಗೆ ಇಲ್ಲ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: 25ನೇ ವಯಸ್ಸಿಗೆ ಬಿಜೆಪಿ ಟಿಕೆಟ್ ಪಡೆದ ಗಾಯಕಿ ಮೈಥಿಲಿ ಠಾಕೂರ್ ಆಸ್ತಿ ಎಷ್ಟು? ಆದಾಯದ ಮೂಲವೇನು?

55
ಮನವಿ

ದಯವಿಟ್ಟು ನನ್ನ ಹೆಸರು, ಫೋಟೋ ಇತ್ಯಾದಿಗಳನ್ನು ಬಳಸುವ ಇಂತಹ ಚಟುವಟಿಕೆಗಳನ್ನು ತಕ್ಷಣವೇ ಕೈಬಿಡುವಂತೆ ಕೇಳಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲೂ ಇಂತಹ ಚಟುವಟಿಕೆಗಳನ್ನು ಮಾಡದಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ. ಗೋಡೆ ಇದ್ದರೆ ತಾನೇ ಚಿತ್ರ ಬರೆಯಲು ಸಾಧ್ಯ. ಹಾಗಾಗಿ, ಎಲ್ಲರೂ ಮೊದಲು ನಿಮ್ಮ ಜೀವನಕ್ಕೆ, ನಿಮ್ಮ ಕುಟುಂಬದವರ ಒಳಿತನ್ನು ಸುಧಾರಿಸಲು ಆದ್ಯತೆ ನೀಡಿ ಎಂದು ಕೇಳಿಕೊಳ್ಳುತ್ತೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಮತ್ತೊಮ್ಮೆ ನನ್ನ ಮನಃಪೂರ್ವಕ ಧನ್ಯವಾದಗಳು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories