ಬೆಂಬಲ ವಾಪಸ್ ಪಡೀತೀವಿ; ಸಿಎಂ ವಿಜಯ್ ಟಿವಿಕೆ ಸರ್ಕಾರಕ್ಕೆ ಸಿಪಿಎಂ ಖಡಕ್ ಎಚ್ಚರಿಕೆ!

Published : May 20, 2026, 08:31 AM IST

ಟಿವಿಕೆ ಸರ್ಕಾರಕ್ಕೆ ಎಐಎಡಿಎಂಕೆ ಶಾಸಕರು ಬೆಂಬಲ ನೀಡಿದ್ದು, ಅವರಿಗೆ ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.  ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಿಎಂ ವಿಜಯ್ ಸರ್ಕಾರಕ್ಕೆ ಸಿಪಿಎಂ ಖಡಕ್ ಸಂದೇಶವೊಂದನ್ನು ರವಾನಿಸಿದೆ ಎಂದು ವರದಿಯಾಗುತ್ತಿದೆ.

PREV
14
ತಮಿಳುನಾಡು ರಾಜಕೀಯ
ತಮಿಳುನಾಡು ವಿಧಾನಸಭೆಯ ವಿಶ್ವಾಸಮತ ಯಾಚನೆ ವೇಳೆ, ಸಿ.ವಿ. ಷಣ್ಮುಗಂ ಮತ್ತು ಎಸ್.ಪಿ. ವೇಲುಮಣಿ ನೇತೃತ್ವದಲ್ಲಿ ಎಐಎಡಿಎಂಕೆಯ 25 ಶಾಸಕರು ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಇದರಿಂದಾಗಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಸಿ.ವಿ. ಷಣ್ಮುಗಂ ನಡುವೆ ಪಕ್ಷದಲ್ಲಿ ಆಂತರಿಕ ಸಂಘರ್ಷ ಶುರುವಾಗಿದೆ. ಇನ್ನೊಂದೆಡೆ, ಟಿವಿಕೆಯನ್ನು ಬೆಂಬಲಿಸಿದ ಎಐಎಡಿಎಂಕೆ ಬಣಕ್ಕೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂಬ ವದಂತಿ ಹಬ್ಬಿದೆ.
24
ಎಐಎಡಿಎಂಕೆ ಶಾಸಕರ ಒಂದು ಬಣ
ಒಂದು ವೇಳೆ ಟಿವಿಕೆ ಪಕ್ಷವು ಎಐಎಡಿಎಂಕೆಯ ಒಂದು ಬಣವನ್ನು ಸೇರಿಸಿಕೊಂಡು ಸರ್ಕಾರ ರಚಿಸುವ ನಿರ್ಧಾರಕ್ಕೆ ಬಂದರೆ, ನಾವು ಖಂಡಿತವಾಗಿಯೂ ನಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡುತ್ತೇವೆ ಎಂದು ಸಿಪಿಎಂ ಸ್ಪಷ್ಟಪಡಿಸಿದೆ.
34
ಬೆಂಬಲ ನೀಡಿರುವ ಬಗ್ಗೆ ಮರುಚಿಂತನೆ

ತಿರುತ್ತರೈಪುಂಡಿಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದರು. 'ತಮಿಳುನಾಡಿನಲ್ಲಿ ಜನರಿಂದ ಆಯ್ಕೆಯಾದ ಸರ್ಕಾರ ರಚನೆಯಾಗಬೇಕು ಎಂಬ ಉದ್ದೇಶದಿಂದ ಎಡಪಕ್ಷಗಳು ಮತ್ತು ವಿಸಿಕೆ ಪಕ್ಷಗಳು ಟಿವಿಕೆಗೆ ಹೊರಗಿನಿಂದ ಬೆಂಬಲ ನೀಡಿವೆ. ಅದರಂತೆ ಟಿವಿಕೆ ಸರ್ಕಾರ ರಚನೆಯಾಗಿದೆ. ಇಂತಹ ಸಂದರ್ಭದಲ್ಲಿ ಎಐಎಡಿಎಂಕೆ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ಅದು ಜನರ ತೀರ್ಪಿಗೆ ವಿರುದ್ಧವಾಗುತ್ತದೆ. ಹಾಗೇನಾದರೂ ನಡೆದರೆ, ಟಿವಿಕೆ ಸರ್ಕಾರಕ್ಕೆ ನೀಡಿದ ಬೆಂಬಲದ ಬಗ್ಗೆ ಮರುಚಿಂತನೆ ನಡೆಸುತ್ತೇವೆ' ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Trisha Secret: ನಟಿ ತ್ರಿಶಾ 'ಗುಡ್ ಟೈಂ' ಸೀಕ್ರೆಟ್ ಹೊರಬಿತ್ತು; ವಿಜಯ್-ಸೂರ್ಯ ಲೈಫಲ್ಲಿ ಈ ನಟಿಯ 'ಕಾಲ್ಗುಣ' ಹಾಗೆಲ್ಲಾ ಇದ್ಯಾ?

44
ವಿಜಯ್ ಆ ಹಂತಕ್ಕೆ ಹೋಗಲ್ಲ ಎಂಬುವುದು ನಮ್ಮ ನಂಬಿಕೆ!

'ಜನರು ಎಐಎಡಿಎಂಕೆ ಮತ್ತು ಡಿಎಂಕೆ ವಿರುದ್ಧ ಮತ ಹಾಕಿದ್ದಾರೆ. ಹೀಗಿರುವಾಗ ಎಐಎಡಿಎಂಕೆಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಜನರ ತೀರ್ಪಿಗೆ ವಿರುದ್ಧ. ಉತ್ತಮ ಆಡಳಿತ ನೀಡುತ್ತೇನೆ ಎಂಬ ಮಾತಿಗೆ ಇದು ವಿರುದ್ಧವಾಗಿ ಬಿಡುತ್ತದೆ. ಮತ್ತೊಂದು ಚುನಾವಣೆಯನ್ನು ಎದುರಿಸಬಾರದು ಮತ್ತು ಹಿಂಬಾಗಿಲಿನಿಂದ ಬಿಜೆಪಿ ರಾಜ್ಯಪಾಲರ ಆಡಳಿತವನ್ನು ತರಬಾರದು ಎಂಬ ಕಾರಣಕ್ಕಾಗಿಯೇ ನಾವು ಟಿವಿಕೆಗೆ ಬೆಂಬಲ ನೀಡಿದ್ದೇವೆ. ಅವರು ಅಂತಹ ಹಂತಕ್ಕೆ ಹೋಗುವುದಿಲ್ಲ ಎಂದು ನಾನು ನಂಬುತ್ತೇನೆ' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Rambha Viral Post: ತಮಿಳುನಾಡಿನ ದೊರೆ ಆಗಿದ್ದಕ್ಕೆ ನಟ ವಿಜಯ್ ಜೋಸೆಫ್‌ಗೆ ನಟಿ ರಂಭಾ ಮಾಡಿರೋ ಪೋಸ್ಟ್ ಏನ್ ಗೊತ್ತಾ?

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories