ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮೊಮ್ಮಗ ದೇವಾಂಶ್ ಹುಟ್ಟುಹಬ್ಬದ ಪ್ರಯುಕ್ತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ತರಿಗೊಂಡದಲ್ಲಿರುವ ವೆಂಕಮಾಂಬಾ ಅನ್ನದಾನ ಛತ್ರಕ್ಕೆ ಒಂದು ದಿನದ ಪ್ರಸಾದ ವಿತರಣೆಗಾಗಿ 44 ಲಕ್ಷ ರೂಪಾಯಿ ದೇಣಿಗೆ ನೀಡಿದರು. ಅಲ್ಲದೆ, ಕುಟುಂಬ ಸದಸ್ಯರೊಂದಿಗೆ ಭಕ್ತರಿಗೆ ಊಟ ಬಡಿಸಿದರು.