ಬೆಟ್ಟದ ಮಾರ್ಗದ ಮೂಲಕ ಹೋಗುವ ಭಕ್ತರು ವಿಶ್ರಾಂತಿ ಪಡೆಯಲು ಕೊಠಡಿಗಳು ಮತ್ತು ಶೌಚಾಲಯ ಸೇರಿದಂತೆ ಸೌಲಭ್ಯಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಕಲ್ಪಿಸಿದೆ. ಇತ್ತೀಚಿನ ದಿನಗಳಲ್ಲಿ ಈ ಎರಡೂ ಬೆಟ್ಟದ ಮಾರ್ಗಗಳಲ್ಲಿ ಚಿರತೆಗಳ ಓಡಾಟ ಇರುವುದರಿಂದ ಭಕ್ತರು ಎಚ್ಚರಿಕೆಯಿಂದ ಸಾಗಬೇಕೆಂದು ಸೂಚಿಸಲಾಗಿತ್ತು. ಈ ನಡುವೆ, ಕೆಲವು ತಿಂಗಳ ಹಿಂದೆ ಪೋಷಕರೊಂದಿಗೆ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದ ಘಟನೆ ಭಕ್ತರಲ್ಲಿ ಆತಂಕವನ್ನುಂಟು ಮಾಡಿತ್ತು.