Published : Feb 22, 2021, 05:17 PM ISTUpdated : Feb 22, 2021, 05:26 PM IST
ಟೂಲ್ಕಿಟ್ ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಯುವತಿ ದಿಶಾ ರವಿಗೆ ಜಾಮೀನು ಸಿಕ್ಕಿಲ್ಲ. ಮತ್ತೆ 1 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೆಚ್ಚಿನ ವಿವರ ಇಲ್ಲಿದೆ.
ರೈತ ಹೋರಾಟದ ದಿಕ್ಕು ತಪ್ಪಿಸಲು, ಭಾರತದ ವಿರುದ್ಧ ಪಿತೂರಿ ನಡೆಸಲು ಸಂಚು ರೂಪಿಸಿ ಟೂಲ್ಕಿಟ್ ಡಾಕ್ಯುಮೆಂಟ್ ತಯಾರಿಸಿದ ಆರೋಪ ಹೊತ್ತಿರುವ ದಿಶಾ ರವಿಗೆ ಮತ್ತೆ ಜಾಮೀನು ಭಾಗ್ಯ ಸಿಕ್ಕಿಲ್ಲ.
ರೈತ ಹೋರಾಟದ ದಿಕ್ಕು ತಪ್ಪಿಸಲು, ಭಾರತದ ವಿರುದ್ಧ ಪಿತೂರಿ ನಡೆಸಲು ಸಂಚು ರೂಪಿಸಿ ಟೂಲ್ಕಿಟ್ ಡಾಕ್ಯುಮೆಂಟ್ ತಯಾರಿಸಿದ ಆರೋಪ ಹೊತ್ತಿರುವ ದಿಶಾ ರವಿಗೆ ಮತ್ತೆ ಜಾಮೀನು ಭಾಗ್ಯ ಸಿಕ್ಕಿಲ್ಲ.
26
ಫೆಬ್ರವರಿ 13 ರಂದು ದೆಹಲಿ ಪೊಲೀಸರು ದಿಶಾ ರವಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ಒಂದು ದಿನದ ಮಟ್ಟಿಗೆ ನ್ಯಾಯಾಲಯ ದಿಶಾ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಫೆಬ್ರವರಿ 13 ರಂದು ದೆಹಲಿ ಪೊಲೀಸರು ದಿಶಾ ರವಿಯನ್ನು ಬಂಧಿಸಿದ್ದರು. ಇದೀಗ ಮತ್ತೆ ಒಂದು ದಿನದ ಮಟ್ಟಿಗೆ ನ್ಯಾಯಾಲಯ ದಿಶಾ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
36
3 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳುತ್ತಿರುವ ಕಾರಣ ದೆಹಲಿ ಪೊಲೀಸರು ದಿಶಾ ರವಿಯನ್ನು ಪಟಿಯಾಲ ಹೌಸ್ ಕೋರ್ಟ್ಗೆ ಹಾಜರು ಪಡಿಸಿದ್ದರು.
3 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳುತ್ತಿರುವ ಕಾರಣ ದೆಹಲಿ ಪೊಲೀಸರು ದಿಶಾ ರವಿಯನ್ನು ಪಟಿಯಾಲ ಹೌಸ್ ಕೋರ್ಟ್ಗೆ ಹಾಜರು ಪಡಿಸಿದ್ದರು.
46
ದಿಶಾ ರವಿ ಜಾಮೀನು ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ಕೋರ್ಟ್ ತೀರ್ಪುನ್ನು ನಾಳೆ(ಫೆ.23) ಪಟಿಯಾಲ ಹೌಸ್ ಕೋರ್ಟ್ ಕಾಯ್ದಿರಿಸಿದೆ. ಇದರ ನಡುವೆ ನ್ಯಾಯಾಂಗ ಬಂಧನ ಅವದಿ ಅಂತ್ಯಗೊಂಡ ಕಾರಣ ಇಂದು ದಿಶಾ ರವಿಯನ್ನು ಕೋರ್ಟ್ಗೆ ಹಾಜರಪುಡಸಿಲಾಗಿದೆ. ಇಷ್ಟೇ ಅಲ್ಲ ಒಂದು ದಿನದ ಮಟ್ಟಿಗೆ ದಿಶಾ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ದಿಶಾ ರವಿ ಜಾಮೀನು ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ಕೋರ್ಟ್ ತೀರ್ಪುನ್ನು ನಾಳೆ(ಫೆ.23) ಪಟಿಯಾಲ ಹೌಸ್ ಕೋರ್ಟ್ ಕಾಯ್ದಿರಿಸಿದೆ. ಇದರ ನಡುವೆ ನ್ಯಾಯಾಂಗ ಬಂಧನ ಅವದಿ ಅಂತ್ಯಗೊಂಡ ಕಾರಣ ಇಂದು ದಿಶಾ ರವಿಯನ್ನು ಕೋರ್ಟ್ಗೆ ಹಾಜರಪುಡಸಿಲಾಗಿದೆ. ಇಷ್ಟೇ ಅಲ್ಲ ಒಂದು ದಿನದ ಮಟ್ಟಿಗೆ ದಿಶಾ ರವಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
56
ರೈತ ಪ್ರತಿಭಟನೆ ಹಾಗೂ ಹೋರಾಟದ ಸ್ವರೂಪ ಕುರಿತ ಟೂಲ್ಕಿಟ್ನ್ನು ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಟ್ವಿಟರ್ ಮೂಲಕ ಪೋಸ್ಟ್ ಮಾಡಿದ್ದರು.
ರೈತ ಪ್ರತಿಭಟನೆ ಹಾಗೂ ಹೋರಾಟದ ಸ್ವರೂಪ ಕುರಿತ ಟೂಲ್ಕಿಟ್ನ್ನು ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಟ್ವಿಟರ್ ಮೂಲಕ ಪೋಸ್ಟ್ ಮಾಡಿದ್ದರು.
66
ಈ ಟೂಲ್ಕಿಟ್ನ್ನು ಖಲಿಸ್ತಾನ ಸಂಘಟನೆಯ ಮೊ ಧಲಿವಾಲ್, ದಿಶಾ ರವಿ ಸೇರಿದಂತೆ ಹಲವರು ನಿರ್ಮಿಸಿದ್ದರು. ಈ ಟೂಲ್ ಕಿಟ್ ರೈತ ಹೋರಾಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಹಾಗೂ ಭಾರತದ ವಿರುದ್ಧ ಪಿತೂರಿ ನಡೆಸಲು ಮಾಡಿದ ಸಂಚಾಗಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಈ ಟೂಲ್ಕಿಟ್ನ್ನು ಖಲಿಸ್ತಾನ ಸಂಘಟನೆಯ ಮೊ ಧಲಿವಾಲ್, ದಿಶಾ ರವಿ ಸೇರಿದಂತೆ ಹಲವರು ನಿರ್ಮಿಸಿದ್ದರು. ಈ ಟೂಲ್ ಕಿಟ್ ರೈತ ಹೋರಾಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಹಾಗೂ ಭಾರತದ ವಿರುದ್ಧ ಪಿತೂರಿ ನಡೆಸಲು ಮಾಡಿದ ಸಂಚಾಗಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ