Published : May 07, 2020, 01:38 PM ISTUpdated : May 07, 2020, 02:01 PM IST
ಆಂಧ್ರಪ್ರದೇಶದ ವಿಶಾಖಪಟ್ಟಣಂನ ರಾಸಾಯನಿಕ ಕಾರ್ಖಾನೆ ನಿರ್ಲಕ್ಷಯದಿಂದ ಸೋರಿಕೆಯಾದ ಅನಿಲ, ಉಸಿರಾಡುವ ಗಾಳಿಯನ್ನೇ ವಿಷವನ್ನಾಗಿ ಮಾರ್ಪಾಡು ಮಾಡಿದೆ. ಈ ವಿಷ ಗಾಳಿ ಸೇವಿಸಿದ ಹತ್ತು ಮಂದಿ ಸಾವನ್ನಪ್ಪಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಈ ದುರಂತ ಭೋಪಾಲ್ ಅನಿಲ ಸೋರಿಕೆ ದುರಂತವನ್ನು ಮತ್ತೆ ನೆನಪಿಸಿದೆ. ಈಗಾಗಲೇ ಪಿಎಂ ಮೋದಿ ಈ ಸಂಬಂಧ ರಾಷ್ಟ್ರೀಯ ವಿಪತ್ತು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇವೆಲ್ಲದರ ನಡುವೆ ಇತ್ತ ಕಾರ್ಖಾನೆ ಆಸುಪಾಸಿನಲ್ಲಿ ಕರುಣಾಜನಕ ಪರಿಸ್ಥಿತಿ ನಿರ್ಮಾಣವಾಗಿದ್ದು, ನಡೆದುಕೊಂಡು ಹೋಗುತ್ತಿದ್ದ ಜನರು ಅಲ್ಲಲ್ಲೇ ಕುಸಿದು ಬೀಳಲಾರಂಭಿಸಿದ್ದಾರೆ.
ಕಾರ್ಖಾನೆಯೊಂದರ ನಿರ್ಲಕ್ಷ್ಯದಿಂದಾಗಿ ಸೋರಿಕೆಯಾದ ಅನಿಲದಿಂದ ದಿನ ಬೆಳಗಾಗುತ್ತಿದ್ದಂತೆಯೇ ಉಸಿರಾಡುವ ಗಾಳಿಯೂ ವಿಷಚವಾಗಿ ಮಾರ್ಪಾಡಾಗಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ ಇನ್ನೂರಕ್ಕೂ ಅಧಿಕ ಮಂದಿ ಇದರಿಂದ ಅಸ್ವಸ್ಥರಾಗಿದ್ದಾರೆ
ಕಾರ್ಖಾನೆಯೊಂದರ ನಿರ್ಲಕ್ಷ್ಯದಿಂದಾಗಿ ಸೋರಿಕೆಯಾದ ಅನಿಲದಿಂದ ದಿನ ಬೆಳಗಾಗುತ್ತಿದ್ದಂತೆಯೇ ಉಸಿರಾಡುವ ಗಾಳಿಯೂ ವಿಷಚವಾಗಿ ಮಾರ್ಪಾಡಾಗಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ ಇನ್ನೂರಕ್ಕೂ ಅಧಿಕ ಮಂದಿ ಇದರಿಂದ ಅಸ್ವಸ್ಥರಾಗಿದ್ದಾರೆ
216
ಹೌದು ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮಕ್ಕಳು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಹೌದು ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮಕ್ಕಳು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
316
ವಿಶಾಖಪಟ್ಟಣಂನ ಆರ್ಆರ್ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಇಲ್ಲಿನ ಎಲ್ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ.
ವಿಶಾಖಪಟ್ಟಣಂನ ಆರ್ಆರ್ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಇಲ್ಲಿನ ಎಲ್ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ.
416
ಈ ವಿಚಾರ ತಿಳಿಯದೆ ಮುಂಜಾನೆ ವಾಕಿಂಗ್ಗೆ ಹೊರಗೆ ಬಂದಿದ್ದ ಅನೇಕ ಮಂದಿರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ.
ಈ ವಿಚಾರ ತಿಳಿಯದೆ ಮುಂಜಾನೆ ವಾಕಿಂಗ್ಗೆ ಹೊರಗೆ ಬಂದಿದ್ದ ಅನೇಕ ಮಂದಿರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ.
516
ಈ ವಿಷಾನಿಯಲ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಗೆ ಹರಡಿರಬಹುದು ಎಂದು ಅಂದಾಜಿಸಲಾಗಿದೆ.
ಈ ವಿಷಾನಿಯಲ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಗೆ ಹರಡಿರಬಹುದು ಎಂದು ಅಂದಾಜಿಸಲಾಗಿದೆ.
616
ಇನ್ನು ಅನೇಕ ಮಂದಿ ತಮ್ಮ ಸುತ್ತಲೂ ಏನಾಗುತ್ತಿದೆ ಎಂದು ತಿಳಿಯದೆ, ಪರಿಸ್ಥಿತಿ ಕಂಡು ಭಯಭೀತರಾಗಿ ಓಡಿ ಹೋಗಿದ್ದಾರೆ.
ಇನ್ನು ಅನೇಕ ಮಂದಿ ತಮ್ಮ ಸುತ್ತಲೂ ಏನಾಗುತ್ತಿದೆ ಎಂದು ತಿಳಿಯದೆ, ಪರಿಸ್ಥಿತಿ ಕಂಡು ಭಯಭೀತರಾಗಿ ಓಡಿ ಹೋಗಿದ್ದಾರೆ.
716
ಅಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.
ಅಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.
816
ಇನ್ನು ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಮತ್ರಿ ಜಗನ್ ಭೇಟಿ ನೀಡಲಿದ್ದಾರೆ.
ಇನ್ನು ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಮತ್ರಿ ಜಗನ್ ಭೇಟಿ ನೀಡಲಿದ್ದಾರೆ.
916
ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಪಡೆದಿದ್ದಾರೆ.
ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಪಡೆದಿದ್ದಾರೆ.
1016
ಆಂಧ್ರಪ್ರದೇಶದ ಈ ವಿಷಾನಿಲ ಸೋರಿಕೆ ಪ್ರಕರಣ 1984ರ ಡಿಸೆಂಬರ್ನಲ್ಲಿ ಮಧ್ಯಪ್ರದೇಶದ ಭೋಪಾಲ್ನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದ್ದ ಗ್ಯಾಸ್ ಸೋರಿಕೆಯ ಕರಾಳ ಘಟನೆಯನ್ನು ನೆನಪಿಸಿದೆ.
ಆಂಧ್ರಪ್ರದೇಶದ ಈ ವಿಷಾನಿಲ ಸೋರಿಕೆ ಪ್ರಕರಣ 1984ರ ಡಿಸೆಂಬರ್ನಲ್ಲಿ ಮಧ್ಯಪ್ರದೇಶದ ಭೋಪಾಲ್ನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದ್ದ ಗ್ಯಾಸ್ ಸೋರಿಕೆಯ ಕರಾಳ ಘಟನೆಯನ್ನು ನೆನಪಿಸಿದೆ.
1116
ವಿಶ್ವದ ಅತ್ಯಂತ ಘೋರ ವಿಷಾನಿಲ ದುರಂತ ಎನ್ನಲಾಗುವ ಭೋಪಾಲ್ ಗ್ಯಾಸ್ ಟ್ರಾಜಿಡಿಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಮಸ್ಯೆಗೀಡಾಗಿದ್ದರು.
ವಿಶ್ವದ ಅತ್ಯಂತ ಘೋರ ವಿಷಾನಿಲ ದುರಂತ ಎನ್ನಲಾಗುವ ಭೋಪಾಲ್ ಗ್ಯಾಸ್ ಟ್ರಾಜಿಡಿಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಮಸ್ಯೆಗೀಡಾಗಿದ್ದರು.
1216
ವೃದ್ಧರು, ಹಿರಿಯರು, ಮಕ್ಕಳು ಹೀಗೆ ಎಲ್ಲರನ್ನೂ ಈ ವಿಷಾನಿಲ ಸೇವಿಸಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.
ವೃದ್ಧರು, ಹಿರಿಯರು, ಮಕ್ಕಳು ಹೀಗೆ ಎಲ್ಲರನ್ನೂ ಈ ವಿಷಾನಿಲ ಸೇವಿಸಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.
1316
ಮನುಷ್ಯರು ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನೂ ಈ ವಿಪ ಅನಿಲ ಬಲಿ ಪಡೆದುಕೊಂಡಿದೆ.
ಮನುಷ್ಯರು ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನೂ ಈ ವಿಪ ಅನಿಲ ಬಲಿ ಪಡೆದುಕೊಂಡಿದೆ.
1416
ಮುದ್ದಿನ ನಾಯಿಯನ್ನೂ ಈ ವಿಷಾನಿಲ ಕಾಡಿದ್ದು, ಅದನ್ನುಳಿಸಲು ಮಾಲೀಕ ಹೊತ್ತುಕೊಂಡು ಸಾಗುತ್ತಿರುವ ಮಾಲೀಕ
ಮುದ್ದಿನ ನಾಯಿಯನ್ನೂ ಈ ವಿಷಾನಿಲ ಕಾಡಿದ್ದು, ಅದನ್ನುಳಿಸಲು ಮಾಲೀಕ ಹೊತ್ತುಕೊಂಡು ಸಾಗುತ್ತಿರುವ ಮಾಲೀಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ