ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ. ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಜನ ಭೇಟಿ ನೀಡುತ್ತಾರೆ. ಕಲಿಯುಗದ ಪ್ರತ್ಯಕ್ಷ ದೈವ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲುತ್ತಾರೆ. ಸಾಮಾನ್ಯ ಭಕ್ತರಷ್ಟೇ ಅಲ್ಲದೆ ರಾಜಕೀಯ, ಸಿನಿಮಾ ಮತ್ತು ವ್ಯಾಪಾರ ಕ್ಷೇತ್ರದ ಗಣ್ಯರು ಸಹ ಸ್ವಾಮಿಯ ದರ್ಶನಕ್ಕೆ ಬರುತ್ತಾರೆ. ಇದೀಗ ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಿದೆ.