ಈ ಸಂಬಂಧ ಮೂವರೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ನಿಮ್ಮ ದಿಟ್ಟ ಮತ್ತು ಸೈದ್ಧಾಂತಿಕ ನಿಲುವು ಎಲ್ಲರ ಪಾಲಿಗೆ ಭರವಸೆಯ ಬೆಳಕಾಗಿದೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮೆಹಬೂಬಾ , ಇಂದಿನ ಭಾರತದಲ್ಲಿ ವಿರೋಧದ ಧ್ವನಿಯನ್ನು ಅಪರಾಧವೆಂಬಂತೆ ನೋಡಲಾಗುತ್ತದೆ. ಇಂಥ ಪರಿಸ್ಥಿತಿಯಲ್ಲಿ ನಿಮ್ಮ ಧ್ವನಿಗಳು ನೆಮ್ಮದಿಯ ನಿಟ್ಟುಸಿರು ಮೂಡುವಂತೆ ಮಾಡಿದೆ. ಕಳೆದೊಂದು ದಶಕದಿಂದ ಭಾರತದ ಬಹುಸಂಖ್ಯಾತವಾದವು ದೇಶದ ಮೂಲ ಮೌಲ್ಯಗಳಾದ ವೈವಿಧ್ಯತೆ ಮತ್ತು ಬಹುತ್ವಕ್ಕೆ ಬೆದರಿಕೆಯೊಡ್ಡುತ್ತಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ನಾಗರಿಕರು ಈ ಅಜೆಂಡಾವನ್ನು ತಿರಸ್ಕರಿಸಿದರೂ ಈಗ, ದ್ವೇಷ ಮತ್ತು ವಿಭಜನೆಗೆ ಉತ್ತೇಜಿಸುವವರೇ ಅಧಿಕಾರದಲ್ಲಿದ್ದಾರೆ. ಸಂವಿಧಾನ, ಸಂಸ್ಥೆಗಳು ಮತ್ತು ಜಾತ್ಯತೀತ ಚೌಕಟ್ಟನ್ನು ಅವರು ಗುರಿ ಮಾಡುತ್ತಿದ್ದಾರೆ. ಇದರ ಬಿಸಿಯನ್ನು ಅಲ್ಪಸಂಖ್ಯಾತರು ಅದರಲ್ಲೂ ಮುಖ್ಯವಾಗಿ ಮುಸ್ಲಿಮರು ಅನುಭವಿಸಬೇಕಾಗಿದೆ. ವಕ್ಫ್ ತಿದ್ದುಪಡಿ ವಿಧೇಯಕವು ನಮ್ಮ ಧಾರ್ಮಿಕ ಸ್ವಾತಂತ್ರ್ಯವನ್ನು ಕಡೆಗಣಿಸುತ್ತದೆ ಎಂದು ಮೆಹೆಬೂಬಾ ಮುಫ್ತಿ ಹೇಳಿದ್ದಾರೆ.
Kolkata
ಮಮತಾ ಬ್ಯಾನರ್ಜಿ ಪುನರುಚ್ಚಾರ
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಹಲವರ ಆಕ್ರೋಶಕ್ಕೆ ಕಾರಣವಾಗಿರುವ ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು ಎಂದಿದ್ದಾರೆ.