ಉದಾಹರಣೆಗೆ ಮಾಸ್ಕ್ ಧರಿಸುವುದು, ಜನದಟ್ಟಣೆಯಿಂದ ದೂರ ಇರುವುದು, ಸಾಮಾಜಿಕ ಅಂತರತ ಕಾಯ್ದುಕೊಳ್ಳುವುದು, ಕೈ ಕಾಲುಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುವುದು. ಗಂಭೀರ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಯಾವುದೇ ರೋಗ ಕಾಣಿಸಿಕೊಂಡ ಬಳಿಕ ಎಚ್ಚೆತ್ತುಕೊಳ್ಳುವ ಬದಲು, ಅದು ಬರೋದಕ್ಕೂ ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೌಮ್ಯಾ ಸ್ವಾಮಿನಾಥನ್ ತಿಳಿಸಿದ್ದಾರೆ.