'ಹೇಳು ಪಾರ್ಥ..' ಎಂದು ಚಟರ್ಜಿಗೆ ಗಂಟುಬಿದ್ದಿದ್ಯಾಕೆ ED, ಅಷ್ಟಕ್ಕೂ ಯಾರೀಕೆ ಅರ್ಪಿತಾ?
First Published Jul 23, 2022, 12:16 PM ISTಕೋಲ್ಕತ್ತಾ (ಜುಲೈ 21): ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿ (WBBPE) ನೇಮಕಾತಿ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಸಚಿವ ಪಾರ್ಥ ಚಟರ್ಜಿ ಅವರ ಅತ್ಯಾಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಂದಾಜು 21 ಕೋಟಿ ನಗದು ಹಾಗೂ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಅರ್ಪಿತಾ ಅವರ ಫ್ಲ್ಯಾಟ್ನಲ್ಲಿ ಪತ್ತೆಯಾಗಿದೆ. ಹಾಗಾದರೆ, ಈ ಹಗರಣಕ್ಕೂ ಅರ್ಪಿತಾ ಮುಖರ್ಜಿಗೆ ಇರುವ ಸಂಬಂಧವೇನು? ನಗದು ಸಹಿತ ಇಡಿ ಅಧಿಕಾರಿಗಳು ಟಾಲಿಗಂಜ್ನ ಡೈಮಂಡ್ ಸಿಟಿ ಕಾಂಪ್ಲೆಕ್ಸ್ನಲ್ಲಿರುವ ಮುಖರ್ಜಿ ಅವರ ಐಷಾರಾಮಿ ನಿವಾಸದಿಂದ 20 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.