ಚೆನ್ನೈ ಸೂಪರ್ ಕಿಂಗ್ಸ್‌ನ ಮತ್ತೋರ್ವ ಸ್ಟಾರ್ ಆಟಗಾರನೂ ಐಪಿಎಲ್‌ನಲ್ಲಿ ಆಡೋದು ಡೌಟ್..!

Suvarna News   | Asianet News
Published : Sep 02, 2020, 09:59 AM IST

ನವದೆಹಲಿ: ಐಪಿಎಲ್‌ ಟೂರ್ನಿ ಆರಂಭಕ್ಕೆ ಕೆಲ ವಾರಗಳಷ್ಟೇ ಬಾಕಿ ಉಳಿದಿದ್ದರೂ ಸಿಎಸ್‌ಕೆ ತಂಡದಲ್ಲಿನ ಸಮಸ್ಯೆಗಳಿನ್ನೂ ಬಗೆಹರಿದಿಲ್ಲ. ಸುರೇಶ್ ರೈನಾ ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಶಾಕ್‌ನಲ್ಲಿರುವಾಗಲೇ ಮಹೇಂದ್ರ ಸಿಂಗ್ ಧೋನಿ ಪಡೆಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಅನುಭವಿ ಸುರೇಶ್ ಜತೆಗೆ ಇದೀಗ ಮತ್ತೋರ್ವ ಅನುಭವಿ ಆಟಗಾರರ ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿಯುವ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

PREV
18
ಚೆನ್ನೈ ಸೂಪರ್ ಕಿಂಗ್ಸ್‌ನ ಮತ್ತೋರ್ವ ಸ್ಟಾರ್ ಆಟಗಾರನೂ ಐಪಿಎಲ್‌ನಲ್ಲಿ ಆಡೋದು ಡೌಟ್..!

ಮೂರು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 13ನೇ ಆವೃತ್ತಿಯ ಐಪಿಎಲ್‌ ಆರಂಭಕ್ಕೂ ಮುನ್ನ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ.

ಮೂರು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 13ನೇ ಆವೃತ್ತಿಯ ಐಪಿಎಲ್‌ ಆರಂಭಕ್ಕೂ ಮುನ್ನ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ.

28

ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರು ಸೇರಿದಂತೆ 13 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿತ್ತು. ಹೀಗಾಗಿ ಆಟಗಾರರು ಇನ್ನೂ ಅಭ್ಯಾಸಕ್ಕಾಗಿ ಮೈದಾನಕ್ಕಿಳಿದಿಲ್ಲ.

ಮೊದಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರು ಸೇರಿದಂತೆ 13 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿತ್ತು. ಹೀಗಾಗಿ ಆಟಗಾರರು ಇನ್ನೂ ಅಭ್ಯಾಸಕ್ಕಾಗಿ ಮೈದಾನಕ್ಕಿಳಿದಿಲ್ಲ.

38

ಇದರ ಬೆನ್ನಲ್ಲೇ ದಿಢೀರ್ ಎನ್ನುವಂತೆ ಮಿಸ್ಟರ್ ಐಪಿಎಲ್ ಎಂದೇ ಕರೆಸಿಕೊಳ್ಳುವ ಸುರೇಶ್ ರೈನಾ ಆಗಸ್ಟ್ 29ರಂದು ಸಂಪೂರ್ಣ ಟೂರ್ನಿಯಿಂದ ಹೊರಗುಳಿಯುವುದಾಗಿ ತಿಳಿಸಿ ಭಾರತಕ್ಕೆ ಬಂದಿದ್ದಾರೆ.

ಇದರ ಬೆನ್ನಲ್ಲೇ ದಿಢೀರ್ ಎನ್ನುವಂತೆ ಮಿಸ್ಟರ್ ಐಪಿಎಲ್ ಎಂದೇ ಕರೆಸಿಕೊಳ್ಳುವ ಸುರೇಶ್ ರೈನಾ ಆಗಸ್ಟ್ 29ರಂದು ಸಂಪೂರ್ಣ ಟೂರ್ನಿಯಿಂದ ಹೊರಗುಳಿಯುವುದಾಗಿ ತಿಳಿಸಿ ಭಾರತಕ್ಕೆ ಬಂದಿದ್ದಾರೆ.

48

ಈ ಶಾಕ್‌ನಿಂದ ಹೊರಬರುವ ಮುನ್ನವೇ ತಾರಾ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ ಈ ಬಾರಿ ಸಿಎಸ್‌ಕೆ ಪರ ಆಡುವುದು ಅನುಮಾನವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. 

ಈ ಶಾಕ್‌ನಿಂದ ಹೊರಬರುವ ಮುನ್ನವೇ ತಾರಾ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ ಈ ಬಾರಿ ಸಿಎಸ್‌ಕೆ ಪರ ಆಡುವುದು ಅನುಮಾನವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. 

58

ಹರ್ಭಜನ್‌ ಸಿಂಗ್‌ ಮಂಗಳವಾರ (ಸೆ.1) ದುಬೈಗೆ ಬರಬೇಕಿತ್ತು. ಆದರೆ ಸಿಎಸ್‌ಕೆ ತಂಡದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದಾಗಿ ಭಜ್ಜಿ ದುಬೈಗೆ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. 

ಹರ್ಭಜನ್‌ ಸಿಂಗ್‌ ಮಂಗಳವಾರ (ಸೆ.1) ದುಬೈಗೆ ಬರಬೇಕಿತ್ತು. ಆದರೆ ಸಿಎಸ್‌ಕೆ ತಂಡದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದಾಗಿ ಭಜ್ಜಿ ದುಬೈಗೆ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. 

68

ಹರ್ಭಜನ್ ಸಿಂಗ್ ಚೆನ್ನೈನಲ್ಲಿ ನಡೆದ ಸಿಎಸ್‌ಕೆ ಕ್ಯಾಂಪ್‌ನಿಂದಲೂ ದೂರವೇ ಉಳಿದಿದ್ದರು. ಇನ್ನು ದುಬೈಗೂ ಸಿಎಸ್‌ಕೆ ಜತೆ ಪ್ರಯಾಣ ಬೆಳೆಸಿಲ್ಲ. ಇದು ಸಾಕಷ್ಟು ಅನುಮಾನವನ್ನು ಹುಟ್ಟುಹಾಕಿದೆ.

ಹರ್ಭಜನ್ ಸಿಂಗ್ ಚೆನ್ನೈನಲ್ಲಿ ನಡೆದ ಸಿಎಸ್‌ಕೆ ಕ್ಯಾಂಪ್‌ನಿಂದಲೂ ದೂರವೇ ಉಳಿದಿದ್ದರು. ಇನ್ನು ದುಬೈಗೂ ಸಿಎಸ್‌ಕೆ ಜತೆ ಪ್ರಯಾಣ ಬೆಳೆಸಿಲ್ಲ. ಇದು ಸಾಕಷ್ಟು ಅನುಮಾನವನ್ನು ಹುಟ್ಟುಹಾಕಿದೆ.

78

ಆಡಿದ ಎಲ್ಲಾ ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಏಕೈಕ ತಂಡ ಎನಿಸಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್‌ಕೆ ಪಡೆ ಈ ಬಾರಿ ರೈನಾ ಇಲ್ಲದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ.
 

ಆಡಿದ ಎಲ್ಲಾ ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಏಕೈಕ ತಂಡ ಎನಿಸಿರುವ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್‌ಕೆ ಪಡೆ ಈ ಬಾರಿ ರೈನಾ ಇಲ್ಲದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ.
 

88

ಸಿಎಸ್‌ಕೆ ತಂಡದ ತುಂಬ ಅನುಭವಿ ಆಟಗಾರರಿದ್ದರೂ ರೈನಾ ಅನುಪಸ್ಥಿತಿ ಹಾಗೆಯೇ ಭಜ್ಜಿ ಒಂದು ವೇಳೆ ಟೂರ್ನಿ ಮಿಸ್‌ ಮಾಡಿಕೊಂಡರೆ ಧೋನಿ ಪಾಳಯ ಸ್ವಲ್ಪ ಹಿನ್ನಡೆ ಅನುಭವಿಸಲಿದೆ ಎಂದರೆ ತಪ್ಪಾಗಲಾರದು. 

ಸಿಎಸ್‌ಕೆ ತಂಡದ ತುಂಬ ಅನುಭವಿ ಆಟಗಾರರಿದ್ದರೂ ರೈನಾ ಅನುಪಸ್ಥಿತಿ ಹಾಗೆಯೇ ಭಜ್ಜಿ ಒಂದು ವೇಳೆ ಟೂರ್ನಿ ಮಿಸ್‌ ಮಾಡಿಕೊಂಡರೆ ಧೋನಿ ಪಾಳಯ ಸ್ವಲ್ಪ ಹಿನ್ನಡೆ ಅನುಭವಿಸಲಿದೆ ಎಂದರೆ ತಪ್ಪಾಗಲಾರದು. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories