ತಮ್ಮ ದೇಶದ ಪರ ಆಡಲು ಸೂರ್ಯಕುಮಾರ್ ಯಾದವ್ಗೆ ಆಹ್ವಾನ ಕೊಟ್ಟ ಕಿವೀಸ್ ಮಾಜಿ ಆಟಗಾರ
First Published Oct 29, 2020, 4:11 PM ISTದುಬೈ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಬಹುತೇಕ ತನ್ನ ಪ್ಲೇ ಆಫ್ ಸ್ಥಾನವನ್ನು ರೋಹಿತ್ ಶರ್ಮಾ ಪಡೆ ಖಚಿತ ಪಡಿಸಿಕೊಂಡಿದೆ.
ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಸೂರ್ಯಕುಮಾರ್ ಯಾದವ್ ಅಜೇಯ ಬ್ಯಾಟಿಂಗ್ ನೆರವಿನಿಂದ ಮುಂಬೈ ಭರ್ಜರಿ ಗೆಲುವು ದಾಖಲಿದೆ. ಕಳೆದ ಕೆಲವು ವರ್ಷಗಳಿಂದ ಅದ್ಭುತ ಫಾರ್ಮ್ನಲ್ಲಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಟೀಂ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿಲ್ಲ. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ಮಾಜಿ ಸ್ಟಾರ್ ಆಟಗಾರ ತಮ್ಮ ದೇಶದ ಪರ ಆಡಲು ಮುಕ್ತ ಆಹ್ವಾನ ನೀಡಿದ್ದಾರೆ.